23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗುರುವಾಯನಕೆರೆ: ಪಿಯು ಶಿಕ್ಷಣ ಹಾಗೂ ನೀಟ್ , ಜೆಇಇ, ಸಿಇಟಿ, ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ವಾಣಿಜ್ಯ ವಿಭಾಗದಲ್ಲಿ ಸಿಎ,ಸಿ ಎಸ್, ಕ್ಲಾಟ್ ಮೊದಲಾದ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕಳೆದ ಬಾರಿಯಂತೆ, ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಅರ್ಜಿ ಆಹ್ವಾನಿಸುತ್ತಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ಪಠ್ಯ ಕ್ರಮದ ಒಂಬತ್ತನೆಯ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 98 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದವರು ಹಾಗೂ ಸಿ ಬಿ ಎಸ್ ಇ/ಐ ಸಿ ಎಸ್ ಇ ಯ ವಿದ್ಯಾರ್ಥಿಗಳು ಶೇಕಡಾ 95 ಮತ್ತು ಹೆಚ್ಚುಅಂಕ ಪಡೆದವರು ಈ ಯೋಜನೆಗೆ ಅರ್ಹರು. ಹತ್ತನೇ ತರಗತಿಯ ಮಧ್ಯಾವಧಿ ಪರೀಕ್ಷೆಯಲ್ಲಿ ಕ್ರಮವಾಗಿ 98 ಶೇಕಡಾ ಹಾಗೂ 95 ಶೇಕಡಾಕ್ಕಿಂತ ಅಧಿಕ ಪಡೆದವರಿಗೆ ಕೂಡಾ ಈ ಯೋಜನೆಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ.

ಎಕ್ಸೆಲ್ ಬೆಳಕು ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪದವಿ ಪೂರ್ವ ಶಿಕ್ಷಣ ಹಾಗೂ ಅವರ ಆಯ್ಕೆಯ ಕೋಚಿಂಗ್ ನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅಥವಾ ಪಾಲಕರು ಕಾಲೇಜು ಕಚೇರಿಗೆ ನೇರವಾಗಿ ಭೇಟಿ ನೀಡಬಹುದು. ಅಥವಾ +918867242769 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya
error: Content is protected !!