July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

ಬೆಳಾಲು : ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ ಅ.26ರಂದು ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅನಂತೇಶ್ವರ ಫ್ರೆಂಡ್ಸ್ ಇದರ ಅಧ್ಯಕ್ಷ ಸಂತೋಷ್ ನಾಯ್ಕ ಕುದ್ದoಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಚೇತನ್ ಸಾಲ್ಯಾನ್ ” ಚೇತನ್ ಕನ್ಸ್ಟ್ರಕ್ಷನ್ ” ಮಾಚಾರು, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಬೆಳಾಲು ಇದರ ಗೌರವಾಧ್ಯಕ್ಷ ಶಿವಕುಮಾರ ಬಾರಿತ್ತಾಯ ಪಾರಲ, ಮುಖ್ಯ ತೀರ್ಪುಗಾರರಾದ ಧರ್ಮೇಂದ್ರ ಕುಮಾರ್, ಸಿಂಧೂರ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷೆ ಶ್ರೀಮತಿ ನಿಶಾಯಶವಂತ್ ಬನಂದೂರು, ಅನಂತೇಶ್ವರ ಫ್ರೆಂಡ್ಸ್ ಇದರ ಉಪಾಧ್ಯಕ್ಷ ರೂಪೇಶ್ ಪೂಜಾರಿ ಪೋಸೊಟ್ಟು ,ಅನಂತೇಶ್ವರ ಫ್ರೆಂಡ್ಸ್ ಇದರ ಕಾರ್ಯದರ್ಶಿಯಾದ ಹರ್ಷಿತ್ ಗೌಡ ಎರ್ಧೊಟ್ಟು ಉಪಸ್ಥಿತರಿದ್ದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಗೌಡ ಆರಿಕೋಡಿ ಇವರು ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಹರಿಪ್ರಸಾದ್ ಗೌಡ ಅರಣೆಮಾರು ಸ್ವಾಗತಿಸಿ, ಗಿರೀಶ್ ಗೌಡ ಮಂಜೋತ್ತು ಕಾರ್ಯಕ್ರಮ ನಿರೂಪಿಸಿದರು. ಯಶವಂತ್ ಗೌಡ ಬನಂದೂರು ವಂದಿಸಿದರು. ನಂತರ ಕೆಸರುಗದ್ದೆಯಲ್ಲಿ ನಡೆದ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ವಿಜೇತರ ಪಟ್ಟಿಯನ್ನು ಕಿರಣ್ ಸುವರ್ಣ ಇರಂತ್ಯಾರು ವಾಚಿಸಿದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya
error: Content is protected !!