ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಯಿಂದ ಮುಂದೆ ನಡೆಯುವ ಪ್ರತಿಯೊಂದು ಸಭೆಗಳಿಗೆ ಭಾಗವಹಿಸಿ ಸಂಘದ ಬೆಳವಣಿಗೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಂಘದ ಅಭಿವೃದ್ಧಿಯಲ್ಲಿ ಕೈ ಜೋಡಿಸಬೇಕೆಂದು ರಬ್ಬರ್ ಬೆಳೆಗಾರರ ಸಂಘದಿಂದ ಅಧಿಕೃತ ಆಹ್ವಾನ ನೀಡಿದ್ದಾರೆ.











