23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಅಕ್ರಮವಾಗಿ ದನವನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ. ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡ ಘಟನೆ ಅ.27ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್ ಒಳಗಡೆ ಅಕ್ರಮವಾಗಿ ಜಾನುವಾರು ಕಡಿದು ಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಓಮನ ನೇತೃತ್ವದ ತಂಡ ಅ.27 ರಂದು ಮಧ್ಯಾಹ್ನ 2:30 ಕ್ಕೆ ದಾಳಿ ಮಾಡಿದ್ದಾರೆ.

ದಾಳಿ ವೇಳೆ 91 ಕೆ.ಜಿ ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದು. ಗೋಮಾಂಸ ಮಾಡುತ್ತಿದ್ದ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಉಸ್ಮಾನ್ ಮಗ ಅಬ್ದುಲ್ ನಝೀರ್(36) ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಅಬ್ದುಲ್ ರಹುಮಾನ್ ಮಗ ಝಕಾರಿಯಾ(36) ಬಂಧಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 4,12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ಮತ್ತು ಕಲಂ 33(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಅನಂದ್.ಎಮ್ ಮತ್ತು ವೇಣೂರು ಸಬ್ ಇನ್ಸ್‌ಪೆಕ್ಟರ್ ಓಮನ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya
error: Content is protected !!