22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗುರುವಾಯನಕೆರೆ: ಪಿಯು ಶಿಕ್ಷಣ ಹಾಗೂ ನೀಟ್ , ಜೆಇಇ, ಸಿಇಟಿ, ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ವಾಣಿಜ್ಯ ವಿಭಾಗದಲ್ಲಿ ಸಿಎ,ಸಿ ಎಸ್, ಕ್ಲಾಟ್ ಮೊದಲಾದ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕಳೆದ ಬಾರಿಯಂತೆ, ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಅರ್ಜಿ ಆಹ್ವಾನಿಸುತ್ತಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ಪಠ್ಯ ಕ್ರಮದ ಒಂಬತ್ತನೆಯ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 98 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದವರು ಹಾಗೂ ಸಿ ಬಿ ಎಸ್ ಇ/ಐ ಸಿ ಎಸ್ ಇ ಯ ವಿದ್ಯಾರ್ಥಿಗಳು ಶೇಕಡಾ 95 ಮತ್ತು ಹೆಚ್ಚುಅಂಕ ಪಡೆದವರು ಈ ಯೋಜನೆಗೆ ಅರ್ಹರು. ಹತ್ತನೇ ತರಗತಿಯ ಮಧ್ಯಾವಧಿ ಪರೀಕ್ಷೆಯಲ್ಲಿ ಕ್ರಮವಾಗಿ 98 ಶೇಕಡಾ ಹಾಗೂ 95 ಶೇಕಡಾಕ್ಕಿಂತ ಅಧಿಕ ಪಡೆದವರಿಗೆ ಕೂಡಾ ಈ ಯೋಜನೆಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ.

ಎಕ್ಸೆಲ್ ಬೆಳಕು ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪದವಿ ಪೂರ್ವ ಶಿಕ್ಷಣ ಹಾಗೂ ಅವರ ಆಯ್ಕೆಯ ಕೋಚಿಂಗ್ ನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅಥವಾ ಪಾಲಕರು ಕಾಲೇಜು ಕಚೇರಿಗೆ ನೇರವಾಗಿ ಭೇಟಿ ನೀಡಬಹುದು. ಅಥವಾ +918867242769 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Related posts

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya
error: Content is protected !!