25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

ನಾರಾವಿ : ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಹಾಗೂ ಪದವಿಪೂರ್ವ ಕಾಲೇಜಗಳು ಸೇರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಶೈಕ್ಷಣಿಕ ತರಬೇತಿ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಸಂಭ್ರಮ 2025 ಕಾಲೇಜು ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಪದುವಾ ಕಾಲೇಜು ಆಫ್ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಮಂಗಳೂರು ಇಲ್ಲಿನ ಪ್ರಾoಶುಪಾಲರಾದ ವಂ. ಸ್ವಾಮಿ ಅರುಣ್ ವಿಲ್ಸನ್ ಲೋಬೋ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಖ್ಯಾತ ರಂಗ ಭೂಮಿ ಹಾಗೂ ಚಲನಚಿತ್ರ ನಟ ರವಿ ರಾಮಕುಂಜ ಹಾಗೂ ಖ್ಯಾತ ಟಿವಿ ನಿರೂಪಕಿ ಕುಮಾರಿ ಕೀರ್ತಿ ಎಸ್ ಇವರು ಆಗಮಿಸಿದ್ದರು.

ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವo. ಸ್ವಾಮಿ ಜೆರೋಮ್ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಾರಾವಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂಜಯ್ ಮೀರಾಂದ, ಕಾರ್ಯದರ್ಶಿ ಎವ್ಜಿನ್ ರೋಡ್ರಿಗಸ್, ನಾರಾವಿ ಗ್ರಾಮ ಪಂಚಾಯತ್ ಸದಸ್ಯೆ ಡೈನಾ ರೋಡ್ರಿಗಸ್, ನಾರಾವಿ ಪ್ರೌಢ ಶಾಲೆ ನಾರಾವಿಯ ಮುಖ್ಯ ಅಧ್ಯಾಪಕ ಗೋಪಾಲಕೃಷ್ಣ ತುಳುಪುಳೆ, ಸಂತ ಪಾವ್ಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಅಧ್ಯಾಪಕಿ ಶ್ರೀಮತಿ ಸೋಫಿಯಾ ಫೆರ್ನಾಂಡಿಸ್, ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯ ಅಧ್ಯಾಪಕರಾದ ರಿಚರ್ಡ್ ಮೋರಸ್, ಸಂಭ್ರಮ 2025 ಕಾರ್ಯಕ್ರಮದ ಆಯೋಜಕರಾದ ಅವಿಲ್ ಮೋರಸ್, ದಿನೇಶ್ ಬಿ ಕೆ ಉಪಸ್ಥಿತರಿದ್ದರು.

ಪ್ರಾoಶುಪಾಲರಾದ ಸಂತೋಷ್ ಸಲ್ದಾನಾ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ರವಿ ರಾಮಕುಂಜ ಹಾಗೂ ಕುಮಾರಿ ಕೀರ್ತಿ ಎಸ್ ಇವರನ್ನು ಸನ್ಮಾನಿಸಲಾಯಿತು. ಹಿಂದಿ ಉಪನ್ಯಾಸಕಿ ಶ್ರೀಮತಿ ಆಶಾ ಧನ್ಯವಾದವಿತ್ತರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಬಿ ಕಾರ್ಯಕ್ರಮ ನಿರೂಪಿಸಿದರು. ಸೇಕ್ರೆಟ್ ಹಾರ್ಟ್ ಕಾಲೇಜು ಮಡoತ್ಯಾರು ಇಲ್ಲಿನ ಉಪನ್ಯಾಸಕ ಅವಿನಾಶ್ ಲೋಬೋ, ಕಾರ್ಯಕ್ರಮ ನಿರೂಪಕ ಜೋವೆಲ್ ಫೆರ್ನಾಂಡಿಸ್ ಹಾಗೂ ಕು. ಕೀರ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ನಂತರ ನಡೆದ ವಿವಿಧ ಸ್ಪರ್ಧೆಗಳಲ್ಲಿ ಸಂತ ಪಾವ್ಲರ ಆಂಗ್ಲ ಮಾಧ್ಯಮ ಶಾಲೆ ನಾರಾವಿ ಪ್ರಥಮ ಸಮಗ್ರ ಪ್ರಶಸ್ತಿಯನ್ನೂ, ಅಳದಂಗಡಿ ಸಂತ ಪೀಟರ್ ಕ್ಲೇವರ್ ಚರ್ಚ್ ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆಯಿತು.

Related posts

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya
error: Content is protected !!