ಉಜಿರೆ : ಇಲ್ಲಿಯ ಓಡಲ ನಿವಾಸಿ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) (86ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.29ರಂದು ನಿಧನರಾದರು.
ಇವರು ಭಾರತ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರು, ಬೆಳ್ತಂಗಡಿ ಲಯನ್ಸ್ ಕ್ಲಬ್ ಸ್ಥಾಪಕ ಸದಸ್ಯರು, ಹಾಗೂ ವಿಜಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಮಾಜಿ ಉಪಾಧ್ಯಕ್ಷರು, ಹಾಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಮೃತರು ಪತ್ನಿ ರುಕ್ಮಿಣಿ, ಇಬ್ಬರು ಪುತ್ರಿಯರಾದ ವೃಂದ, ಪ್ರಿಯ , ಓರ್ವ ಪುತ್ರ ಚಿತ್ರೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.











