September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

ಬೆಳ್ತಂಗಡಿ : ಎಸ್.ಐ.ಟಿ ತಂಡದಲ್ಲಿ ಸೂಪರ್ ಕಾಪ್ ಎಂದು ಹೆಸರು ಪಡೆದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನಿಂದ ಸತ್ಯ ಕಕ್ಕಿಸಿ ಜೈಲಿಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಇವರಿಗೆ ಸರಕಾರ ಡಿವೈಎಸ್ಪಿ ಆಗಿ ಪದೋನ್ನತಿ ನೀಡಿತ್ತು ಇದೀಗ ಲೋಕಾಯುಕ್ತ ಇಲಾಖೆಗೆ ಡಿವೈಎಸ್ಪಿಯಾಗಿ ನೇಮಕ ಮಾಡಿದೆ. ಆದ್ರೆ ಧರ್ಮಸ್ಥಳ ಪ್ರಕರಣ ಮುಗಿಯುವವರೆಗೆ ಎಸ್.ಐ.ಟಿ ಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಮೂಲತಃ ಮಂಡ್ಯ ಜಿಲ್ಲೆಯ ನಿವಾಸಿ ಮಂಜುನಾಥ್ ಗೌಡ ಇವರನ್ನು ಸರಕಾರ ಧರ್ಮಸ್ಥಳ ಪ್ರಕರಣದ ಎಸ್.ಐ.ಟಿ ಗೆ ನೇಮಕ ಮಾಡಿದ್ದರು. ಅ.13 ರಂದು ಸರಕಾರ ಡಿವೈಎಸ್ಪಿ ಹುದ್ದೆಗೆ ಪದೋನ್ನತಿ ನೀಡಿತ್ತು.‌ಎಸ್.ಐ.ಟಿ ಪ್ರಕರಣ ಮುಕ್ತಾಯವಾದ ಬಳಿಕ ಲೋಕಾಯುಕ್ತ ಇಲಾಖೆಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯನ ಬೆಂಬಲಿಗರು ಸುಳ್ಳು ಆರೋಪಗಳನ್ನು ಎದುರು ಹಾಕಿಕೊಂಡರೂ ಕೂಡ ಕ್ಯಾರೆ ಮಾಡದೆ ಚಿನ್ನಯ್ಯನಿಂದ ಸತ್ಯ ಹೊರಗಡೆ ಬರುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Related posts

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya
error: Content is protected !!