25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ‌ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿ ವಿಧಾನ ಸೌಧದ ಎದುರು ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ 20ಮಂದಿ ಹಾಗೂ ಇತರರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎ.ಎಸ್.ಐ. ದುರ್ಗಾದಾಸ್ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಅ.27ರಂದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಸೌಜನ್ಯ ಪರ ಹೋರಾಟಗಾರರ ವಿರುದ್ದ ಪೊಲೀಸರು ಸುಳ್ಳು ಪ್ರಕರಣ‌ ದಾಖಲಿಸುತ್ತಿದ್ದಾರೆ ಎಂದು ತಹಶಿಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುವ ಕಾರ್ಯಕ್ರಮವನ್ನು ಸೌಜನ್ಯ ಪರ ಹೋರಾಟಗಾರರು ಘೋಷಿಸಿದ್ದರು ಪೊಲೀಸ್ ಇಲಾಖೆ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿತ್ತು. ಮನವಿ ನೀಡಲು ಬಂದಿದ್ದವರನ್ನು ಪೊಲೀಸರು ತಡೆದು ಒಂದಿಷ್ಟು ಗೊಂದಲಗಳಿಗೂ ಕಾರಣವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ, ಪ್ರದೀಪ್ ಕುಲಾಲ್, ಶ್ರೀನಿವಾಸ ಗೌಡ, ರವೀಂದ್ರ ಶೆಟ್ಟಿ, ಪ್ರಸನ್ನ ರವಿ, ಉದಯ ಪ್ರಸಾದ್, ಕುಸುಮಾವತಿ, ವೆಂಕಪ್ಪ ಕೋಟ್ಯಾನ್, ತನುಷ್ ಶೆಟ್ಟಿ, ಮೋಹನ್ ಶೆಟ್ಟಿ, ಜಯರಾಮ ಗೌಡ, ಸಂತೋಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಯೋಗೀಶ್ ಕುಲಾಲ್, ನಾರಾವಿ ವಿಜಯ, ರವೀಂದ್ರ ಶೆಟ್ಟಿ ಮುಡಿಪು, ಶಶಿಕಲಾ ಶೆಟ್ಟಿ, ಪೂಜಾಶ್ರೀ ಧರ್ಮಸ್ಥಳ, ಟಿಕ್ಕಿ ರವಿ, ಹಾಗೂ ಇತರರ ವಿರುದ್ದ ಬಿ.ಎನ್.ಎಸ್. 189(2), 190, 285, 57 ಕರ್ನಾಟಕ ಪೋಲಿಸ್ ಆಕ್ಟ್ 1963 31(o) 103(ii) ಅಡಿಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಆಗಿರುವ ಗಡಿಪಾರು ಆದೇಶದ ಬಗ್ಗೆ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ತೀರ್ಪು ಬಾಕಿಯಿರುವ ಹಿನ್ನಲೆಯಲ್ಲಿ ಅನಿಲ್ ಕುಮಾರ್ ಅಂತರ ಅವರ ಮನವಿಯನ್ನು ತಿರಸ್ಕರಿಸಿ ಪ್ರತಿಭಟನೆ ನಡೆಸಲು ಮನವಿ ನಡೆಸಲು ಅನುಮತಿ ನಿರಾಕರಿಸಿತ್ತು. ಅರ್ಜಿದಾರರು ತಿಳಿಸಿದ ದಿನ ಸೋಮವಾರವಾಗಿದ್ದು ಸಂತೆ ನಡೆಯುವ ಕಾರಣದಿಂದ ಸಾರ್ವಜನಿಕರು ಅತಿ ಹೆಚ್ಚು ಸಂಖ್ಯೆಯಲ್ಲಿ ತಾಲೂಕು ಕಚೇರಿಗೆ ಬರುವ ಕಾರಣದಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣದಿಂದ ಅದನ್ನು ಮುಂದೂಡಲು ಸೂಚಿಸಲಾಗಿತ್ತು ಇದನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿತ್ತು. ಆದರೆ ಪೊಲೀಸ್ ಇಲಾಖೆ ನೀಡಿದ ಸ್ಪಷ್ಟ ಸೂಚನೆಯನ್ನು ನಿರ್ಲಕ್ಷಿಸಿ ಯಾವುದೇ ಪೂರ್ವಾನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತೆ ಮತ್ತು ಸುಳ್ಳು ದೂರುಗಳ ವಿರುದ್ದ ಸಮರ ಎಂಬಿತ್ಯಾದಿ ಪ್ರಚೋದನಾತ್ಮಕವಾಗಿ ಪ್ರಕಟಿಸಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ರೀತಿಯಲ್ಲಿ ಅ.27ರಂದು ಬೆಳ್ತಂಗಡಿ ತಾಲುಕು ಕಚೇರಿಗೆ ಹೋಗಿ ಬರುವ ಸಾರ್ವಜನಿಕ ರಸ್ತೆ ಹಾಗೂ ತಾಲೂಕು ಕಚೇರಿ ಎದುರು ಆರೋಪಿತರು ಅಕ್ರಮ ಕೂಟ ಸೇರಿ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ ತಾಲೂಕು ಕಚೇರಿಗೆ ಹೋಗಿ ಬರುವವರಿಗೆ ಅಡ್ಡಿಯುಂಟು ಮಾಡಿರುವುದಾಗಿ ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!