July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ‌ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿ ವಿಧಾನ ಸೌಧದ ಎದುರು ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ 20ಮಂದಿ ಹಾಗೂ ಇತರರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎ.ಎಸ್.ಐ. ದುರ್ಗಾದಾಸ್ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಅ.27ರಂದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಸೌಜನ್ಯ ಪರ ಹೋರಾಟಗಾರರ ವಿರುದ್ದ ಪೊಲೀಸರು ಸುಳ್ಳು ಪ್ರಕರಣ‌ ದಾಖಲಿಸುತ್ತಿದ್ದಾರೆ ಎಂದು ತಹಶಿಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುವ ಕಾರ್ಯಕ್ರಮವನ್ನು ಸೌಜನ್ಯ ಪರ ಹೋರಾಟಗಾರರು ಘೋಷಿಸಿದ್ದರು ಪೊಲೀಸ್ ಇಲಾಖೆ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿತ್ತು. ಮನವಿ ನೀಡಲು ಬಂದಿದ್ದವರನ್ನು ಪೊಲೀಸರು ತಡೆದು ಒಂದಿಷ್ಟು ಗೊಂದಲಗಳಿಗೂ ಕಾರಣವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ, ಪ್ರದೀಪ್ ಕುಲಾಲ್, ಶ್ರೀನಿವಾಸ ಗೌಡ, ರವೀಂದ್ರ ಶೆಟ್ಟಿ, ಪ್ರಸನ್ನ ರವಿ, ಉದಯ ಪ್ರಸಾದ್, ಕುಸುಮಾವತಿ, ವೆಂಕಪ್ಪ ಕೋಟ್ಯಾನ್, ತನುಷ್ ಶೆಟ್ಟಿ, ಮೋಹನ್ ಶೆಟ್ಟಿ, ಜಯರಾಮ ಗೌಡ, ಸಂತೋಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಯೋಗೀಶ್ ಕುಲಾಲ್, ನಾರಾವಿ ವಿಜಯ, ರವೀಂದ್ರ ಶೆಟ್ಟಿ ಮುಡಿಪು, ಶಶಿಕಲಾ ಶೆಟ್ಟಿ, ಪೂಜಾಶ್ರೀ ಧರ್ಮಸ್ಥಳ, ಟಿಕ್ಕಿ ರವಿ, ಹಾಗೂ ಇತರರ ವಿರುದ್ದ ಬಿ.ಎನ್.ಎಸ್. 189(2), 190, 285, 57 ಕರ್ನಾಟಕ ಪೋಲಿಸ್ ಆಕ್ಟ್ 1963 31(o) 103(ii) ಅಡಿಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಆಗಿರುವ ಗಡಿಪಾರು ಆದೇಶದ ಬಗ್ಗೆ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ತೀರ್ಪು ಬಾಕಿಯಿರುವ ಹಿನ್ನಲೆಯಲ್ಲಿ ಅನಿಲ್ ಕುಮಾರ್ ಅಂತರ ಅವರ ಮನವಿಯನ್ನು ತಿರಸ್ಕರಿಸಿ ಪ್ರತಿಭಟನೆ ನಡೆಸಲು ಮನವಿ ನಡೆಸಲು ಅನುಮತಿ ನಿರಾಕರಿಸಿತ್ತು. ಅರ್ಜಿದಾರರು ತಿಳಿಸಿದ ದಿನ ಸೋಮವಾರವಾಗಿದ್ದು ಸಂತೆ ನಡೆಯುವ ಕಾರಣದಿಂದ ಸಾರ್ವಜನಿಕರು ಅತಿ ಹೆಚ್ಚು ಸಂಖ್ಯೆಯಲ್ಲಿ ತಾಲೂಕು ಕಚೇರಿಗೆ ಬರುವ ಕಾರಣದಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣದಿಂದ ಅದನ್ನು ಮುಂದೂಡಲು ಸೂಚಿಸಲಾಗಿತ್ತು ಇದನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿತ್ತು. ಆದರೆ ಪೊಲೀಸ್ ಇಲಾಖೆ ನೀಡಿದ ಸ್ಪಷ್ಟ ಸೂಚನೆಯನ್ನು ನಿರ್ಲಕ್ಷಿಸಿ ಯಾವುದೇ ಪೂರ್ವಾನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತೆ ಮತ್ತು ಸುಳ್ಳು ದೂರುಗಳ ವಿರುದ್ದ ಸಮರ ಎಂಬಿತ್ಯಾದಿ ಪ್ರಚೋದನಾತ್ಮಕವಾಗಿ ಪ್ರಕಟಿಸಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ರೀತಿಯಲ್ಲಿ ಅ.27ರಂದು ಬೆಳ್ತಂಗಡಿ ತಾಲುಕು ಕಚೇರಿಗೆ ಹೋಗಿ ಬರುವ ಸಾರ್ವಜನಿಕ ರಸ್ತೆ ಹಾಗೂ ತಾಲೂಕು ಕಚೇರಿ ಎದುರು ಆರೋಪಿತರು ಅಕ್ರಮ ಕೂಟ ಸೇರಿ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ ತಾಲೂಕು ಕಚೇರಿಗೆ ಹೋಗಿ ಬರುವವರಿಗೆ ಅಡ್ಡಿಯುಂಟು ಮಾಡಿರುವುದಾಗಿ ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!