July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

ಬೆಳ್ತಂಗಡಿ: ಹಬ್ಬಗಳ ಪೈಕಿ ರಾಜನ ಸ್ಥಾನದಲ್ಲಿರುವ ಹಬ್ಬ ದೀಪಾವಳಿ. ಕತ್ತಲೆಯನ್ನು ಓಡಿಸುವ ಶಕ್ತಿ ಬೆಳಕಿಗಿದೆ. ಆದ್ದರಿಂದ ಅಂಧಕಾರ ತೊಲಗಿ‌ ಎಲ್ಲರ ಬಾಳಲ್ಲಿ ಹೊಸ ಬೆಳಕು ಮೂಡಲಿ. ಋಣಾತ್ಮಕತೆಯಿಂದ ಧನಾತ್ಮಕತೆಗೆ ಕೊಂಡೊಯ್ಯುವ ಬೆಳಕಿನ ಹಬ್ಬವೇ ಈ ದೀಪಾವಳಿ ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಹೇಳಿದರು.

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಬಲಿಪ ರೆಸಾರ್ಟ್ ಸಭಾಂಗಣದಲ್ಲಿ ಅ.28 ರಂದು ನಡೆದ ಸಾಮೂಹಿಕ ದೀಪಾವಳಿ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ವಹಿಸಿದ್ದರು. ಉದ್ಘಾಟನೆಯ ವೇಳೆ ಮುರಳಿ ಬಲಿಪ ಅವರ ಮಾತೃಶ್ರೀಯವರು, ಧರ್ಮಪತ್ನಿ ಮನೋರಮಾ ಬಲಿಪ ಜೊತೆಯಾಗಿ ದೀಪ ಪ್ರಜ್ವಲನಗೊಳಿಸಿದರು.

ಶಿಕ್ಷಣ ಕ್ಷೇತ್ರದ ಸಾಧನೆಗೆ ಪ್ರಶಸ್ತಿ ಪಡೆದ ಲಯನ್ಸ್ ಕ್ಲಬ್ ಕಾರ್ಯದರ್ಶಿ ಅಮಿತಾನಂದ ಹೆಗ್ಡೆ ಅವರನ್ನು ಈ ವೇಳೆ ಸನ್ಮಾನಿಸಿ ಗೌರವಿಸಲಾಯಿತು.

ಲಿಯೋ ಕ್ಲಬ್ ಅಧ್ಯಕ್ಷೆ ಡಾ. ಭಾಷಿಣಿ ಪ್ರಾರ್ಥನೆ ಹಾಡುವುದರ ಜೊತೆಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕ ನಾಣ್ಯಪ್ಪ ನಾಯ್ಕ್ ಸ್ವಾಗತಿಸಿದರು. ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ನಿರೂಪಿಸಿದರು. ವಸಂತ ಶೆಟ್ಟಿ ಹಾಗೂ ಕೃಷ್ಣ ಆಚಾರ್ ಅತಿಥಿ ಮತ್ತು ಸನ್ಮಾನಿತರ ಪರಿಚಯ ಮಾಡಿದರು. ಉಪಾಹಾರದ ಪ್ರಾಯೋಜಕರಾದ ಜಯರಾಂ ಭಂಡಾರಿ ಧರ್ಮಸ್ಥಳ, ನಾಣ್ಯಪ್ಪ ನಾಯ್ಕ್ ಮತ್ತು ಕೃಷ್ಣ ಆಚಾರ್ ಅವರನ್ನು ಗೌರವಿಸಲಾಯಿತು.

ದೀಪಾವಳಿ ಪ್ರಯುಕ್ತ ರಂಗೋಲಿ ಬಿಡಿಸಲಾಯಿತು. ದೋಸೆ ಸಹಿತ ಇರುವ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಸಾಂಪ್ರದಾಯಿಕ ಉಡುಗೆ ತೊಡುಗೆ ತೊಟ್ಟು ಸ್ಪರ್ಧೆ ಇತ್ಯಾಧಿ ಆಟೋಟ ಸ್ಪರ್ಧೆಗಳನ್ನು ಮನೋರಂಜನಾತ್ಮಕವಾಗಿ ಆಚರಿಸಲಾಯಿತು. ಕೋಶಾಧಿಕಾರಿ ಅಮಿತಾನಂದ ಹೆಗ್ಡೆ ವಂದಿಸಿದರು.

Related posts

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!