24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

ಬೆಳ್ತಂಗಡಿ : ಎಸ್.ಐ.ಟಿ ತಂಡದಲ್ಲಿ ಸೂಪರ್ ಕಾಪ್ ಎಂದು ಹೆಸರು ಪಡೆದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನಿಂದ ಸತ್ಯ ಕಕ್ಕಿಸಿ ಜೈಲಿಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಇವರಿಗೆ ಸರಕಾರ ಡಿವೈಎಸ್ಪಿ ಆಗಿ ಪದೋನ್ನತಿ ನೀಡಿತ್ತು ಇದೀಗ ಲೋಕಾಯುಕ್ತ ಇಲಾಖೆಗೆ ಡಿವೈಎಸ್ಪಿಯಾಗಿ ನೇಮಕ ಮಾಡಿದೆ. ಆದ್ರೆ ಧರ್ಮಸ್ಥಳ ಪ್ರಕರಣ ಮುಗಿಯುವವರೆಗೆ ಎಸ್.ಐ.ಟಿ ಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಮೂಲತಃ ಮಂಡ್ಯ ಜಿಲ್ಲೆಯ ನಿವಾಸಿ ಮಂಜುನಾಥ್ ಗೌಡ ಇವರನ್ನು ಸರಕಾರ ಧರ್ಮಸ್ಥಳ ಪ್ರಕರಣದ ಎಸ್.ಐ.ಟಿ ಗೆ ನೇಮಕ ಮಾಡಿದ್ದರು. ಅ.13 ರಂದು ಸರಕಾರ ಡಿವೈಎಸ್ಪಿ ಹುದ್ದೆಗೆ ಪದೋನ್ನತಿ ನೀಡಿತ್ತು.‌ಎಸ್.ಐ.ಟಿ ಪ್ರಕರಣ ಮುಕ್ತಾಯವಾದ ಬಳಿಕ ಲೋಕಾಯುಕ್ತ ಇಲಾಖೆಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯನ ಬೆಂಬಲಿಗರು ಸುಳ್ಳು ಆರೋಪಗಳನ್ನು ಎದುರು ಹಾಕಿಕೊಂಡರೂ ಕೂಡ ಕ್ಯಾರೆ ಮಾಡದೆ ಚಿನ್ನಯ್ಯನಿಂದ ಸತ್ಯ ಹೊರಗಡೆ ಬರುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Related posts

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya
error: Content is protected !!