July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಸಮೀಪ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅ.೨೯ರಂದು ವರದಿಯಾಗಿದೆ.


ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ನಾವೂರಿನ ಹೊಡಿಕ್ಕಾರು ನಿವಾಸಿ ಕಬ್ಬಡಿ ಕ್ರೀಡಾಪಟು ಚಂದ್ರಹಾಸ(೨೮ವ) ಅವರಿಗೆ ತಲೆ ಹಾಗೂ ಕಾಲಿಗೆ ಬಲವಾದ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.


ಅವಿವಾಹಿತರಾದ ಅವರು ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು ಮನೆಯ ಆಧಾರಸ್ತಂಭವಾಗಿದ್ದು ತಂದೆ ಗಂಗಯ್ಯ, ತಾಯಿ ಕುಸುಮ ಹಾಗೂ ಇಬ್ಬರು ಸಹೋದರಿಯರಾದ ಲೀಲಾವತಿ, ಸುಮಲತಾರವರನ್ನು ಅಗಲಿದ್ದಾರೆ.

Related posts

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!