September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

ಬೆಳ್ತಂಗಡಿ: ಹಬ್ಬಗಳ ಪೈಕಿ ರಾಜನ ಸ್ಥಾನದಲ್ಲಿರುವ ಹಬ್ಬ ದೀಪಾವಳಿ. ಕತ್ತಲೆಯನ್ನು ಓಡಿಸುವ ಶಕ್ತಿ ಬೆಳಕಿಗಿದೆ. ಆದ್ದರಿಂದ ಅಂಧಕಾರ ತೊಲಗಿ‌ ಎಲ್ಲರ ಬಾಳಲ್ಲಿ ಹೊಸ ಬೆಳಕು ಮೂಡಲಿ. ಋಣಾತ್ಮಕತೆಯಿಂದ ಧನಾತ್ಮಕತೆಗೆ ಕೊಂಡೊಯ್ಯುವ ಬೆಳಕಿನ ಹಬ್ಬವೇ ಈ ದೀಪಾವಳಿ ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಹೇಳಿದರು.

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಬಲಿಪ ರೆಸಾರ್ಟ್ ಸಭಾಂಗಣದಲ್ಲಿ ಅ.28 ರಂದು ನಡೆದ ಸಾಮೂಹಿಕ ದೀಪಾವಳಿ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ವಹಿಸಿದ್ದರು. ಉದ್ಘಾಟನೆಯ ವೇಳೆ ಮುರಳಿ ಬಲಿಪ ಅವರ ಮಾತೃಶ್ರೀಯವರು, ಧರ್ಮಪತ್ನಿ ಮನೋರಮಾ ಬಲಿಪ ಜೊತೆಯಾಗಿ ದೀಪ ಪ್ರಜ್ವಲನಗೊಳಿಸಿದರು.

ಶಿಕ್ಷಣ ಕ್ಷೇತ್ರದ ಸಾಧನೆಗೆ ಪ್ರಶಸ್ತಿ ಪಡೆದ ಲಯನ್ಸ್ ಕ್ಲಬ್ ಕಾರ್ಯದರ್ಶಿ ಅಮಿತಾನಂದ ಹೆಗ್ಡೆ ಅವರನ್ನು ಈ ವೇಳೆ ಸನ್ಮಾನಿಸಿ ಗೌರವಿಸಲಾಯಿತು.

ಲಿಯೋ ಕ್ಲಬ್ ಅಧ್ಯಕ್ಷೆ ಡಾ. ಭಾಷಿಣಿ ಪ್ರಾರ್ಥನೆ ಹಾಡುವುದರ ಜೊತೆಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕ ನಾಣ್ಯಪ್ಪ ನಾಯ್ಕ್ ಸ್ವಾಗತಿಸಿದರು. ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ನಿರೂಪಿಸಿದರು. ವಸಂತ ಶೆಟ್ಟಿ ಹಾಗೂ ಕೃಷ್ಣ ಆಚಾರ್ ಅತಿಥಿ ಮತ್ತು ಸನ್ಮಾನಿತರ ಪರಿಚಯ ಮಾಡಿದರು. ಉಪಾಹಾರದ ಪ್ರಾಯೋಜಕರಾದ ಜಯರಾಂ ಭಂಡಾರಿ ಧರ್ಮಸ್ಥಳ, ನಾಣ್ಯಪ್ಪ ನಾಯ್ಕ್ ಮತ್ತು ಕೃಷ್ಣ ಆಚಾರ್ ಅವರನ್ನು ಗೌರವಿಸಲಾಯಿತು.

ದೀಪಾವಳಿ ಪ್ರಯುಕ್ತ ರಂಗೋಲಿ ಬಿಡಿಸಲಾಯಿತು. ದೋಸೆ ಸಹಿತ ಇರುವ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಸಾಂಪ್ರದಾಯಿಕ ಉಡುಗೆ ತೊಡುಗೆ ತೊಟ್ಟು ಸ್ಪರ್ಧೆ ಇತ್ಯಾಧಿ ಆಟೋಟ ಸ್ಪರ್ಧೆಗಳನ್ನು ಮನೋರಂಜನಾತ್ಮಕವಾಗಿ ಆಚರಿಸಲಾಯಿತು. ಕೋಶಾಧಿಕಾರಿ ಅಮಿತಾನಂದ ಹೆಗ್ಡೆ ವಂದಿಸಿದರು.

Related posts

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲರ್ಸ್ ಡೇ 2026–27

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya
error: Content is protected !!