September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

ಮಡಂತ್ಯಾರು: ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಕ್ಷೇತ್ರದಲ್ಲಿರುವವರೆಲ್ಲರೂ ಒಂದೆಡೆ ಸೇರಿ ಚಳವಳಿಯ ಸಾಧನೆ, ಪ್ರಗತಿಯ ಅವಲೋಕನದ ಜೊತೆಗೆ ಸಾಧನೆ ಬಗ್ಗೆ ಹೆಮ್ಮೆ ಪಟ್ಟುಕೊಂಡು ಮುಂದಿನ ಬೆಳವಣಿಗೆ ಬಗ್ಗೆ ಚಿಂತನೆ ನಡೆಸಿ 72ನೇ ಸಹಕಾರಿ ಸಪ್ತಾಹವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರ ಬೇಕೆಂದು ಮಡಂತ್ಯಾರು ಸಹಕಾರಿ ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ ಹೇಳಿದರು.

ಅವರು ಅ.29ರಂದು ಮಡಂತ್ಯಾರು ಸಿಎ ಬ್ಯಾಂಕಿನ ಸಭಾ ಭವನದಲ್ಲಿ ಅಖಿಲಾ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನ.೧೪ರಂದು ಜಿಲ್ಲಾ ಮಟ್ಟದ ಸಪ್ತಾಹ ಕಾರ್ಯಕ್ರಮವದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ಈಗಾಗಲೇ ಕಾರ್ಯಕ್ರಮದ ರೂಪುರೇಷೆ ಸಿದ್ದಪಡಿಸಲಾಗಿದೆ ಎಂದರು.

ವೇದಿಕೆಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ, ಸಹಕಾರಿ ಯೂನಿಯನ್ ನಿರ್ದೇಶಕ ಸತೀಶ್ ಕಾಶಿಪಟ್ಣ, ದಕ ಜಿಲ್ಲಾ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಪ್ರಭಾಕರ ಹುಲಿಮೇರು, ಸಹಕಾರಿ ಯೂನಿಯನ್ ಸಿಇಓ ಹೀರೆಮಠ್, ಮಡಂತ್ಯಾರು ಸಹಕಾರಿ ಸಂಘದ ಉಪಾಧ್ಯಕ್ಷ ಕಾಂತಪ್ಪ ಗೌಡ, ಸಿಇಓ ಜೋಕಿಂ ಡಿಸೋಜ, ವಿವಿಧ ಸೊಸೈಟಿಯ ಅಧ್ಯಕ್ಷರು,ನಿರ್ದೇಶಕರುಗಳು,ಸಿಇಓ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.

ಮಡಂತ್ಯಾರು ಸಿಎ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿಗಳು ಸಹಕರಿಸಿದರು

Related posts

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ಮನ್ ಷ್ಯರ್ ಅಕಾಡಮಿಯ ಕಾಲೇಜು ಉಪಪ್ರಾಂಶುಪಾಲೆ ಗೌತಮಿ ಶರಣ್. ಪಿ. ಆರ್.ಪ್ರಾಂಶುಪಾಲರಾಗಿ ಪದೋನ್ನತಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!