September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ವ್ಯಾಪ್ತಿಯ ಹಿತ್ತಿಲಬೈಲು ಎಂಬಲ್ಲಿ ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೂತನ ಹಿಂದೂ ರುದ್ರ ಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಅ.30 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ರಾವ್ ವೈಧಿಕ ವಿಧಿ ವಿಧಾನ ನೇರವೇರಿಸಿದರು.

ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್ ಮಾತನಾಡಿ 2023-24ನೇ ಸಾಲಿನ 15ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಕಟ್ಟಡದ ಕಾಮಗಾರಿಯನ್ನು ಪ್ರಾರಂಭಿಸಿದ್ದು ಮುಂದೆ ಮೂಲಭೂತ ಸೌಕರ್ಯಗಳಾದ ಕಟ್ಟಿಗೆ ದಾಸ್ತಾನು, ಸ್ನಾನಗೃಹ ಮತ್ತು ಶೌಚಾಲಯ ಹಾಗೂ ಸುತ್ತ ತಡೆಗೋಡೆ ನಿರ್ಮಾಣವಾಗಲಿದೆ. ಇಲ್ಲಿ ರುದ್ರಭೂಮಿ ನಿರ್ಮಾಣವಾಗಿರುವುದರಿಂದ ಮಾಲಾಡಿ ಹಾಗೂ ಸೋಣಂದೂರು ಗ್ರಾಮಗಳ ನಾಗರಿಕರಿಗೆ ಅನುಕೂಲವಾಗಿದೆ.

ಈ ಕಾಮಗಾರಿಗಳಿಗೆ ಸಂಘ ಸಂಸ್ಥೆಗಳ ಹಾಗೂ ದಾನಿಗಳನ್ನು ಸಹಕಾರವನ್ನು ಯಾಚಿಸುತ್ತಾ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಹಿಂದೂ ರುದ್ರ ಭೂಮಿ 1 ಎಕ್ರೆ 66 ಸೆಂಟ್ಸ್ ಜಾಗದಲ್ಲಿದ್ದು ಈಗಾಗಲೇ ಅಂದಾಜು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಹಿಂದೂ ರುದ್ರ ಭೂಮಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಉಪಾಧ್ಯಕ್ಷ ಸೆಲೆಸ್ತೀನ್ ಡಿಸೋಜ, ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ ಸುವರ್ಣ, ಸುಧಾಕರ್ ಆಳ್ವ, ಉಮೇಶ್, ಜಯಂತಿ, ವಸಂತ ಪೂಜಾರಿ, ಬೇಬಿ ಸುಸ್ಸಾನ, ವಿದ್ಯಾ ಪಿ.ಸಾಲಿಯಾನ್, ರುಬಿನಾ, ತುಳಸಿ ಬಿ. ಹಾಗೂ ಬೆನೆಡಿಕ್ಟ್ ಮಿರಾಂದ, ಪಿಡಿಒ ಕೆ.ರಾಜಶೇಖರ್ ರೈ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ , ರವಿಶಂಕರ್ ಶೆಟ್ಟಿ ಹಾಗೂ ಜಗನ್ನಾಥ ಶೆಟ್ಟಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya
error: Content is protected !!