March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

ಮುಂಡೂರು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುಂಡೂರು ಅ.30ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಶಾಲೆಗೆ ಕೊಡುಗೆಯಾಗಿ ಎಲ್ಲಾ ಮಕ್ಕಳಿಗೂ ಒಂದು ಜೊತೆ ಸಮವಸ್ತ್ರವನ್ನು ಅಮೂಲ್ಯ ಜನಸೇವಾ ಪ್ರತಿಷ್ಠಾನ (ಕಕ್ಕುಡೆ ಮನೆ ಮುಂಡೂರು) ಬೆಂಗಳೂರು ಮತ್ತು ದಿವಂಗತ ಸುಮನಾಜಿ ಅವರ ಸ್ಮರಣಾರ್ಥ ಅಶೋಕ್ ಜೈನ ಮುಂಡೂರು ಮನೆ ಕುಟುಂಬದವರು ಕೊಡುಗೆಯಾಗಿ ಶಾಲೆಗೆ ಧ್ವನಿವರ್ಧಕ ಮತ್ತು ಕಪಾಟನ್ನು ನೀಡಿರುತ್ತಾರೆ.

ಈ ಎರಡು ಕುಟುಂಬಕ್ಕೂ ಶಾಲೆ ಪರವಾಗಿ ಪ್ರೀತಿಪೂರ್ವಕ ಗೌರವದ ವಂದನೆಗಳನ್ನು ಸಲ್ಲಿಸಲಾಯಿತು.ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಕೇಶವಮೂಲ್ಯ ವಹಿಸಿದ್ದರು.

ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ.ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಹಾಗೂ ಅಶೋಕ್ ಕುಮಾರ್ ಜೈನ್ ಕುಟುಂಬದವರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶ್ ಕೆ ಬಿ ಸ್ವಾಗತಿಸಿ, ಕು. ವಿಶಾಲ ಧನ್ಯವಾದವಿತ್ತರು. ಶ್ರೀಮತಿ ಸಾವಿತ್ರಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಹಾಗೂ ಊರಿನ ವಿದ್ಯಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Related posts

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya
error: Content is protected !!