23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ಮಹಾಗೋಪುರ, ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ

ಉರುವಾಲು: ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ಮಹಾಗೋಪುರ ಮತ್ತು ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ ಅ.೨೩ರಂದು ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಗೋಪುರ ಉದ್ಘಾಟನೆ ಹಾಗೂ ಸಭಾಭವನ ಲೋಕರ್ಪಾಣೆ ಕಾರ್ಯಕ್ರಮ ಮುಂಬರುವ ಡಿಸೆಂಬರ್ ೭ ಹಾಗೂ ೮ರಂದು ವೈಧಿಕ ವಿಧಿವಿಧಾನಗಳೊಂದಿಗೆ ಜರುಗಲಿದೆ. ಅಥರ್ವಶೇಷ ಗಣಯಾಗ ಹಾಗೂ ಮಹಾ ಚಂಡಿಕಾಯಾಗಕ್ಕೆ ಉರುವಾಲು ಗ್ರಾಮದ ಪ್ರತಿ ಮನೆಗಳಿಂದ ಒಂದು ಮುಷ್ಟಿ ಎಳ್ಳು ಹಾಗೂ ನಾರಿಕೇಳವನ್ನು ಮನೆ ದೇವರ ಮುಂದೆ 11 ದಿನ ಇರಿಸಿ ಪೂಜಿಸಿದಲ್ಲಿ ಗ್ರಾಮ ಸುಭೀಕ್ಷೆಗೊಂಡು ನಮಗೆ ದೇವರ ಅನುಗ್ರಹ ಪ್ರಾಪ್ತಿಯಾಗಲಿದೆ ಎಂದು ವಿವರಿಸಿದರು.

ಭಜನಾ ಮಂದಿರದ ಮಹಾಗೋಪುರ ಹಾಗೂ ಸಮುದಾಯ ಭವನದ ಲೋಕಾರ್ಪಣೆಯು ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ವಿಶೇಷವಾಗಿ ಕಾರ್ಯಕ್ರಮದಲ್ಲಿ ಮೈಸೂರಿನ ರಾಜಮನೆತನದ ಯದುವೀರ್ ಕೃಷ್ಣದತ್ತ ಒಡೆಯರ್ ಭಾಗವಹಿಸುವುದರಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ, ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳ ನೇಮಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.

ಸಭೆಯಲ್ಲಿ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಮೊಕ್ತೇಸರರಾದ ಅತುಲ್ ಕುಮಾರ್ ಹಲೇಜಿ, ಕೊರಿಂಜ ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಯೋಗೀಶ್ ಕುಮಾರ್ ಕಡ್ತಿಲ, ಶ್ರೀ ಕ್ಷೇತ್ರ ಧ.ಗ್ರಾ.ಯೋ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ, ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು, ಪದ್ಮುಂಜ ಪ್ಯಾಕ್ಸ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಕಣಿಯೂರು ಗ್ರಾ.ಪಂ.ಸದಸ್ಯ ಸೀತಾರಾಮ ಮಡಿವಾಳ, ವಿವಿಧ ಧಾರ್ಮಿಕ ಸಾಮಾಜಿಕ ಕ್ಷೇತ್ರದ ಮುಖಂಡರುಗಳು, ಕಣಿಯೂರು ಜಿ.ಪಂ. ವ್ಯಾಪ್ತಿಯ ಎಲ್ಲಾ ಭಜನಾ ಮಂಡಳಿಯ ದೇವಸ್ಥಾನದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗೌರಿ ಗಣೇಶ ಮಾತೃ ಮಂಡಳಿಯ ಪದಾಧಿಕಾರಿಗಳು ಮತ್ತು ಭಕ್ತರು ಉಪಸ್ಥಿತರಿದ್ದರು. ತಣ್ಣೀರುಪಂತ ಪ್ಯಾಕ್ಸ್ ನಿರ್ದೇಶಕ ರೋಹಿತ್ ಶೆಟ್ಟಿ ಕುಪ್ಪೆಟ್ಟಿ ಸ್ವಾಗತಿಸಿ, ಹರೀಶ್ ಶೆಟ್ಟಿ ವಂದಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆಶಿ

Suddi Udaya
error: Content is protected !!