July 24, 2026
ಧಾರ್ಮಿಕ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ಮಹಾಗೋಪುರ, ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ

ಉರುವಾಲು: ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ಮಹಾಗೋಪುರ ಮತ್ತು ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ ಅ.೨೩ರಂದು ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಗೋಪುರ ಉದ್ಘಾಟನೆ ಹಾಗೂ ಸಭಾಭವನ ಲೋಕರ್ಪಾಣೆ ಕಾರ್ಯಕ್ರಮ ಮುಂಬರುವ ಡಿಸೆಂಬರ್ ೭ ಹಾಗೂ ೮ರಂದು ವೈಧಿಕ ವಿಧಿವಿಧಾನಗಳೊಂದಿಗೆ ಜರುಗಲಿದೆ. ಅಥರ್ವಶೇಷ ಗಣಯಾಗ ಹಾಗೂ ಮಹಾ ಚಂಡಿಕಾಯಾಗಕ್ಕೆ ಉರುವಾಲು ಗ್ರಾಮದ ಪ್ರತಿ ಮನೆಗಳಿಂದ ಒಂದು ಮುಷ್ಟಿ ಎಳ್ಳು ಹಾಗೂ ನಾರಿಕೇಳವನ್ನು ಮನೆ ದೇವರ ಮುಂದೆ 11 ದಿನ ಇರಿಸಿ ಪೂಜಿಸಿದಲ್ಲಿ ಗ್ರಾಮ ಸುಭೀಕ್ಷೆಗೊಂಡು ನಮಗೆ ದೇವರ ಅನುಗ್ರಹ ಪ್ರಾಪ್ತಿಯಾಗಲಿದೆ ಎಂದು ವಿವರಿಸಿದರು.

ಭಜನಾ ಮಂದಿರದ ಮಹಾಗೋಪುರ ಹಾಗೂ ಸಮುದಾಯ ಭವನದ ಲೋಕಾರ್ಪಣೆಯು ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ವಿಶೇಷವಾಗಿ ಕಾರ್ಯಕ್ರಮದಲ್ಲಿ ಮೈಸೂರಿನ ರಾಜಮನೆತನದ ಯದುವೀರ್ ಕೃಷ್ಣದತ್ತ ಒಡೆಯರ್ ಭಾಗವಹಿಸುವುದರಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ, ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳ ನೇಮಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.

ಸಭೆಯಲ್ಲಿ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಮೊಕ್ತೇಸರರಾದ ಅತುಲ್ ಕುಮಾರ್ ಹಲೇಜಿ, ಕೊರಿಂಜ ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಯೋಗೀಶ್ ಕುಮಾರ್ ಕಡ್ತಿಲ, ಶ್ರೀ ಕ್ಷೇತ್ರ ಧ.ಗ್ರಾ.ಯೋ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ, ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು, ಪದ್ಮುಂಜ ಪ್ಯಾಕ್ಸ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಕಣಿಯೂರು ಗ್ರಾ.ಪಂ.ಸದಸ್ಯ ಸೀತಾರಾಮ ಮಡಿವಾಳ, ವಿವಿಧ ಧಾರ್ಮಿಕ ಸಾಮಾಜಿಕ ಕ್ಷೇತ್ರದ ಮುಖಂಡರುಗಳು, ಕಣಿಯೂರು ಜಿ.ಪಂ. ವ್ಯಾಪ್ತಿಯ ಎಲ್ಲಾ ಭಜನಾ ಮಂಡಳಿಯ ದೇವಸ್ಥಾನದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗೌರಿ ಗಣೇಶ ಮಾತೃ ಮಂಡಳಿಯ ಪದಾಧಿಕಾರಿಗಳು ಮತ್ತು ಭಕ್ತರು ಉಪಸ್ಥಿತರಿದ್ದರು. ತಣ್ಣೀರುಪಂತ ಪ್ಯಾಕ್ಸ್ ನಿರ್ದೇಶಕ ರೋಹಿತ್ ಶೆಟ್ಟಿ ಕುಪ್ಪೆಟ್ಟಿ ಸ್ವಾಗತಿಸಿ, ಹರೀಶ್ ಶೆಟ್ಟಿ ವಂದಿಸಿದರು.

Related posts

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya
error: Content is protected !!