38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

ಮಡಂತ್ಯಾರು: ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಕ್ಷೇತ್ರದಲ್ಲಿರುವವರೆಲ್ಲರೂ ಒಂದೆಡೆ ಸೇರಿ ಚಳವಳಿಯ ಸಾಧನೆ, ಪ್ರಗತಿಯ ಅವಲೋಕನದ ಜೊತೆಗೆ ಸಾಧನೆ ಬಗ್ಗೆ ಹೆಮ್ಮೆ ಪಟ್ಟುಕೊಂಡು ಮುಂದಿನ ಬೆಳವಣಿಗೆ ಬಗ್ಗೆ ಚಿಂತನೆ ನಡೆಸಿ 72ನೇ ಸಹಕಾರಿ ಸಪ್ತಾಹವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರ ಬೇಕೆಂದು ಮಡಂತ್ಯಾರು ಸಹಕಾರಿ ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ ಹೇಳಿದರು.

ಅವರು ಅ.29ರಂದು ಮಡಂತ್ಯಾರು ಸಿಎ ಬ್ಯಾಂಕಿನ ಸಭಾ ಭವನದಲ್ಲಿ ಅಖಿಲಾ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನ.೧೪ರಂದು ಜಿಲ್ಲಾ ಮಟ್ಟದ ಸಪ್ತಾಹ ಕಾರ್ಯಕ್ರಮವದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ಈಗಾಗಲೇ ಕಾರ್ಯಕ್ರಮದ ರೂಪುರೇಷೆ ಸಿದ್ದಪಡಿಸಲಾಗಿದೆ ಎಂದರು.

ವೇದಿಕೆಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ, ಸಹಕಾರಿ ಯೂನಿಯನ್ ನಿರ್ದೇಶಕ ಸತೀಶ್ ಕಾಶಿಪಟ್ಣ, ದಕ ಜಿಲ್ಲಾ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಪ್ರಭಾಕರ ಹುಲಿಮೇರು, ಸಹಕಾರಿ ಯೂನಿಯನ್ ಸಿಇಓ ಹೀರೆಮಠ್, ಮಡಂತ್ಯಾರು ಸಹಕಾರಿ ಸಂಘದ ಉಪಾಧ್ಯಕ್ಷ ಕಾಂತಪ್ಪ ಗೌಡ, ಸಿಇಓ ಜೋಕಿಂ ಡಿಸೋಜ, ವಿವಿಧ ಸೊಸೈಟಿಯ ಅಧ್ಯಕ್ಷರು,ನಿರ್ದೇಶಕರುಗಳು,ಸಿಇಓ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.

ಮಡಂತ್ಯಾರು ಸಿಎ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿಗಳು ಸಹಕರಿಸಿದರು

Related posts

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
error: Content is protected !!