September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ವ್ಯಾಪ್ತಿಯ ಹಿತ್ತಿಲಬೈಲು ಎಂಬಲ್ಲಿ ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೂತನ ಹಿಂದೂ ರುದ್ರ ಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಅ.30 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ರಾವ್ ವೈಧಿಕ ವಿಧಿ ವಿಧಾನ ನೇರವೇರಿಸಿದರು.

ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್ ಮಾತನಾಡಿ 2023-24ನೇ ಸಾಲಿನ 15ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಕಟ್ಟಡದ ಕಾಮಗಾರಿಯನ್ನು ಪ್ರಾರಂಭಿಸಿದ್ದು ಮುಂದೆ ಮೂಲಭೂತ ಸೌಕರ್ಯಗಳಾದ ಕಟ್ಟಿಗೆ ದಾಸ್ತಾನು, ಸ್ನಾನಗೃಹ ಮತ್ತು ಶೌಚಾಲಯ ಹಾಗೂ ಸುತ್ತ ತಡೆಗೋಡೆ ನಿರ್ಮಾಣವಾಗಲಿದೆ. ಇಲ್ಲಿ ರುದ್ರಭೂಮಿ ನಿರ್ಮಾಣವಾಗಿರುವುದರಿಂದ ಮಾಲಾಡಿ ಹಾಗೂ ಸೋಣಂದೂರು ಗ್ರಾಮಗಳ ನಾಗರಿಕರಿಗೆ ಅನುಕೂಲವಾಗಿದೆ.

ಈ ಕಾಮಗಾರಿಗಳಿಗೆ ಸಂಘ ಸಂಸ್ಥೆಗಳ ಹಾಗೂ ದಾನಿಗಳನ್ನು ಸಹಕಾರವನ್ನು ಯಾಚಿಸುತ್ತಾ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಹಿಂದೂ ರುದ್ರ ಭೂಮಿ 1 ಎಕ್ರೆ 66 ಸೆಂಟ್ಸ್ ಜಾಗದಲ್ಲಿದ್ದು ಈಗಾಗಲೇ ಅಂದಾಜು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಹಿಂದೂ ರುದ್ರ ಭೂಮಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಉಪಾಧ್ಯಕ್ಷ ಸೆಲೆಸ್ತೀನ್ ಡಿಸೋಜ, ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ ಸುವರ್ಣ, ಸುಧಾಕರ್ ಆಳ್ವ, ಉಮೇಶ್, ಜಯಂತಿ, ವಸಂತ ಪೂಜಾರಿ, ಬೇಬಿ ಸುಸ್ಸಾನ, ವಿದ್ಯಾ ಪಿ.ಸಾಲಿಯಾನ್, ರುಬಿನಾ, ತುಳಸಿ ಬಿ. ಹಾಗೂ ಬೆನೆಡಿಕ್ಟ್ ಮಿರಾಂದ, ಪಿಡಿಒ ಕೆ.ರಾಜಶೇಖರ್ ರೈ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ , ರವಿಶಂಕರ್ ಶೆಟ್ಟಿ ಹಾಗೂ ಜಗನ್ನಾಥ ಶೆಟ್ಟಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ: ಅನುಗ್ರಹದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!