23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

ಮುಂಡೂರು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುಂಡೂರು ಅ.30ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಶಾಲೆಗೆ ಕೊಡುಗೆಯಾಗಿ ಎಲ್ಲಾ ಮಕ್ಕಳಿಗೂ ಒಂದು ಜೊತೆ ಸಮವಸ್ತ್ರವನ್ನು ಅಮೂಲ್ಯ ಜನಸೇವಾ ಪ್ರತಿಷ್ಠಾನ (ಕಕ್ಕುಡೆ ಮನೆ ಮುಂಡೂರು) ಬೆಂಗಳೂರು ಮತ್ತು ದಿವಂಗತ ಸುಮನಾಜಿ ಅವರ ಸ್ಮರಣಾರ್ಥ ಅಶೋಕ್ ಜೈನ ಮುಂಡೂರು ಮನೆ ಕುಟುಂಬದವರು ಕೊಡುಗೆಯಾಗಿ ಶಾಲೆಗೆ ಧ್ವನಿವರ್ಧಕ ಮತ್ತು ಕಪಾಟನ್ನು ನೀಡಿರುತ್ತಾರೆ.

ಈ ಎರಡು ಕುಟುಂಬಕ್ಕೂ ಶಾಲೆ ಪರವಾಗಿ ಪ್ರೀತಿಪೂರ್ವಕ ಗೌರವದ ವಂದನೆಗಳನ್ನು ಸಲ್ಲಿಸಲಾಯಿತು.ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಕೇಶವಮೂಲ್ಯ ವಹಿಸಿದ್ದರು.

ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ.ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಹಾಗೂ ಅಶೋಕ್ ಕುಮಾರ್ ಜೈನ್ ಕುಟುಂಬದವರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶ್ ಕೆ ಬಿ ಸ್ವಾಗತಿಸಿ, ಕು. ವಿಶಾಲ ಧನ್ಯವಾದವಿತ್ತರು. ಶ್ರೀಮತಿ ಸಾವಿತ್ರಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಹಾಗೂ ಊರಿನ ವಿದ್ಯಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Related posts

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya
error: Content is protected !!