September 6, 2026
ಸಾಧಕರು

ಹೆಮ್ಮೆಯ ಕನ್ನಡಿಗ ‘ರಾಷ್ಟ್ರಪ್ರಶಸ್ತಿ’ಗೆ ಲ| ಡಾ.ಗೋಪಾಲಕೃಷ್ಣ ಕಾಂಚೋಡು ಆಯ್ಕೆ

ಬೆಳ್ತಂಗಡಿ: ಪ್ರಗತಿಪರ ಕೃಷಿಕ ಹಾಗೂ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಲ| ಡಾ.ಗೋಪಾಲಕೃಷ್ಣ ಕಾಂಚೋಡು ಅವರು ಬೆಂಗಳೂರಿನ ಪ್ರಿಯದರ್ಶಿನಿ ಗ್ರಾಮೀಣ ಅಭಿವೃದ್ಧಿ ಫೌಂಡೇಶನ್ ಕರ್ನಾಟಕ ರಾಜ್ಯ ನಾಮಕರಣ 52ನೇ ವರ್ಷದ ಸುವರ್ಣ ವರ್ಷಾಚರಣೆ ಅಂಗವಾಗಿ, 71ನೇ ಕರ್ನಾಟಕ ರಾಜ್ಯೋತ್ಸವದ ಶುಭಸಂದರ್ಭದಲ್ಲಿ ನೀಡುವ ‘ಹೆಮ್ಮೆಯ ಕನ್ನಡಿಗ’ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ.24ರಂದು ಬೆಂಗಳೂರಿನ ರಂಗಮಂದಿರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕನ್ನಡ ರಾಜೋತ್ಸವ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಕಾಂಚೋಡು ಅವರಿಗೆ ಈ ಪ್ರಶಸ್ತಿಯನ್ನು ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಡಾ. ಗೋಪಾಲಕೃಷ್ಣ ಕಾಂಚೋಡು ಅವರು ಪ್ರಗತಿಪರ ಸಾವಯವ ಕೃಷಿಕರಾಗಿದ್ದು, ಎ.ಕೆ.ಎಂ.ಎಸ್.ಎಸ್‌ನ ಜಿಲ್ಲಾ ಗೌರವಾಧ್ಯಕ್ಷರಾಗಿ, ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸದಸ್ಯರಾಗಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಇವರು ‘ಜೈಜವಾನ್ ಜೈ ಕಿಸಾನ್’ ರಾಷ್ಟ್ರಮಟ್ಟದ ಪ್ರಶಸ್ತಿ ಹಾಗೂ ‘ಕರಾವಳಿ ರತ್ನ’ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದಾರೆ.

Related posts

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೆ ರ‌್ಯಾಂಕ್

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya
error: Content is protected !!