July 23, 2026
ಸಾಧಕರು

ಹೆಮ್ಮೆಯ ಕನ್ನಡಿಗ ‘ರಾಷ್ಟ್ರಪ್ರಶಸ್ತಿ’ಗೆ ಲ| ಡಾ.ಗೋಪಾಲಕೃಷ್ಣ ಕಾಂಚೋಡು ಆಯ್ಕೆ

ಬೆಳ್ತಂಗಡಿ: ಪ್ರಗತಿಪರ ಕೃಷಿಕ ಹಾಗೂ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಲ| ಡಾ.ಗೋಪಾಲಕೃಷ್ಣ ಕಾಂಚೋಡು ಅವರು ಬೆಂಗಳೂರಿನ ಪ್ರಿಯದರ್ಶಿನಿ ಗ್ರಾಮೀಣ ಅಭಿವೃದ್ಧಿ ಫೌಂಡೇಶನ್ ಕರ್ನಾಟಕ ರಾಜ್ಯ ನಾಮಕರಣ 52ನೇ ವರ್ಷದ ಸುವರ್ಣ ವರ್ಷಾಚರಣೆ ಅಂಗವಾಗಿ, 71ನೇ ಕರ್ನಾಟಕ ರಾಜ್ಯೋತ್ಸವದ ಶುಭಸಂದರ್ಭದಲ್ಲಿ ನೀಡುವ ‘ಹೆಮ್ಮೆಯ ಕನ್ನಡಿಗ’ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ.24ರಂದು ಬೆಂಗಳೂರಿನ ರಂಗಮಂದಿರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕನ್ನಡ ರಾಜೋತ್ಸವ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಕಾಂಚೋಡು ಅವರಿಗೆ ಈ ಪ್ರಶಸ್ತಿಯನ್ನು ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಡಾ. ಗೋಪಾಲಕೃಷ್ಣ ಕಾಂಚೋಡು ಅವರು ಪ್ರಗತಿಪರ ಸಾವಯವ ಕೃಷಿಕರಾಗಿದ್ದು, ಎ.ಕೆ.ಎಂ.ಎಸ್.ಎಸ್‌ನ ಜಿಲ್ಲಾ ಗೌರವಾಧ್ಯಕ್ಷರಾಗಿ, ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸದಸ್ಯರಾಗಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಇವರು ‘ಜೈಜವಾನ್ ಜೈ ಕಿಸಾನ್’ ರಾಷ್ಟ್ರಮಟ್ಟದ ಪ್ರಶಸ್ತಿ ಹಾಗೂ ‘ಕರಾವಳಿ ರತ್ನ’ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದಾರೆ.

Related posts

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya
error: Content is protected !!