September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾಕೂಟದಲ್ಲಿ ಹಿಮಾನ್ಸ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದು, ಉಜಿರೆ ಶ್ರೀರಾಮ್ ತರಕಾರಿ ಅಂಗಡಿಯ ವಿಜಯ್ ಕುಮಾರ್ ಹಾಗೂ ಸುಮಾ ದಂಪತಿ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಎರಡೂ ಜನರೇಟರ್ ಇದ್ದೂ ಯಾವುದೇ ಪ್ರಯೋಜನಕ್ಕಿಲ್ಲ: ಜನರು ಅಗತ್ಯ ಕೆಲಸಕ್ಕಾಗಿ ಕಾದು ವಾಪಸ್ ಹೋಗಬೇಕಾದ ಪರಿಸ್ಥಿತಿ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!