ಧಾರ್ಮಿಕ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ಮಹಾಗೋಪುರ, ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ

ಉರುವಾಲು: ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ಮಹಾಗೋಪುರ ಮತ್ತು ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ ಅ.೨೩ರಂದು ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಗೋಪುರ ಉದ್ಘಾಟನೆ ಹಾಗೂ ಸಭಾಭವನ ಲೋಕರ್ಪಾಣೆ ಕಾರ್ಯಕ್ರಮ ಮುಂಬರುವ ಡಿಸೆಂಬರ್ ೭ ಹಾಗೂ ೮ರಂದು ವೈಧಿಕ ವಿಧಿವಿಧಾನಗಳೊಂದಿಗೆ ಜರುಗಲಿದೆ. ಅಥರ್ವಶೇಷ ಗಣಯಾಗ ಹಾಗೂ ಮಹಾ ಚಂಡಿಕಾಯಾಗಕ್ಕೆ ಉರುವಾಲು ಗ್ರಾಮದ ಪ್ರತಿ ಮನೆಗಳಿಂದ ಒಂದು ಮುಷ್ಟಿ ಎಳ್ಳು ಹಾಗೂ ನಾರಿಕೇಳವನ್ನು ಮನೆ ದೇವರ ಮುಂದೆ 11 ದಿನ ಇರಿಸಿ ಪೂಜಿಸಿದಲ್ಲಿ ಗ್ರಾಮ ಸುಭೀಕ್ಷೆಗೊಂಡು ನಮಗೆ ದೇವರ ಅನುಗ್ರಹ ಪ್ರಾಪ್ತಿಯಾಗಲಿದೆ ಎಂದು ವಿವರಿಸಿದರು.

ಭಜನಾ ಮಂದಿರದ ಮಹಾಗೋಪುರ ಹಾಗೂ ಸಮುದಾಯ ಭವನದ ಲೋಕಾರ್ಪಣೆಯು ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ವಿಶೇಷವಾಗಿ ಕಾರ್ಯಕ್ರಮದಲ್ಲಿ ಮೈಸೂರಿನ ರಾಜಮನೆತನದ ಯದುವೀರ್ ಕೃಷ್ಣದತ್ತ ಒಡೆಯರ್ ಭಾಗವಹಿಸುವುದರಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ, ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳ ನೇಮಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.

ಸಭೆಯಲ್ಲಿ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಮೊಕ್ತೇಸರರಾದ ಅತುಲ್ ಕುಮಾರ್ ಹಲೇಜಿ, ಕೊರಿಂಜ ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಯೋಗೀಶ್ ಕುಮಾರ್ ಕಡ್ತಿಲ, ಶ್ರೀ ಕ್ಷೇತ್ರ ಧ.ಗ್ರಾ.ಯೋ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ, ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು, ಪದ್ಮುಂಜ ಪ್ಯಾಕ್ಸ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಕಣಿಯೂರು ಗ್ರಾ.ಪಂ.ಸದಸ್ಯ ಸೀತಾರಾಮ ಮಡಿವಾಳ, ವಿವಿಧ ಧಾರ್ಮಿಕ ಸಾಮಾಜಿಕ ಕ್ಷೇತ್ರದ ಮುಖಂಡರುಗಳು, ಕಣಿಯೂರು ಜಿ.ಪಂ. ವ್ಯಾಪ್ತಿಯ ಎಲ್ಲಾ ಭಜನಾ ಮಂಡಳಿಯ ದೇವಸ್ಥಾನದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗೌರಿ ಗಣೇಶ ಮಾತೃ ಮಂಡಳಿಯ ಪದಾಧಿಕಾರಿಗಳು ಮತ್ತು ಭಕ್ತರು ಉಪಸ್ಥಿತರಿದ್ದರು. ತಣ್ಣೀರುಪಂತ ಪ್ಯಾಕ್ಸ್ ನಿರ್ದೇಶಕ ರೋಹಿತ್ ಶೆಟ್ಟಿ ಕುಪ್ಪೆಟ್ಟಿ ಸ್ವಾಗತಿಸಿ, ಹರೀಶ್ ಶೆಟ್ಟಿ ವಂದಿಸಿದರು.

Related posts

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!