23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ ಗೌಡ ಅವರ ವಿರುದ್ದ ಬಲವಂತದ ಕ್ರಮ ಬೇಡ ಎಂದು ರಾಜ್ಯ ಉಚ್ಚ ನ್ಯಾಯಾಲಯ ಆದೇಶ ನೀಡಿದ್ದು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೂ ಮುಂದಿನ ವಿಚಾರಣೆಯ ವರೆಗೆ ತಾತ್ಕಲಿಕ ತಡೆಯಾಜ್ಞೆ ನೀಡಿದೆ.

ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ತಮಗೆ ಎಸ್.ಐ.ಟಿ ನೀಡಿರುವ ನೋಟೀಸ್ ಅನ್ನು ರದ್ದು ಪಡಿಸಬೇಕು, ಪ್ರಕರಣ ರದ್ದು ಪಡಿಸಬೇಕು ಎಂದು ಸಲ್ಲಿಸಿದ್ದ ಮನವಿಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಗುರುವಾರ ವಿಚಾರಣೆ ನಡೆದು ಎರಡೂ ಕಡೆಯವರ ವಾದ ವಿವಾದ ಆಲಿಸಿದ ನ್ಯಾಯಾಧೀಶರು ಈ ನಾಲ್ವರು ಹೋರಾಟಗಾರರ ವಿರುದ್ದ ಬಲವಂತದ ಕ್ರಮ ಬೇಡ ಎಂದು ಆದೇಶ ನೀಡಿದ್ದಾರೆ.

ಅದೇ ರೀತಿ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೂ ತಡೆಯಾಜ್ಞೆ ನೀಡಿದ್ದಾರೆ. ನ್ಯಾಯಾಲಯದಲ್ಲಿ ಎಸ್.ಐ.ಟಿ ಪರ ವಕೀಲರು ಮಹೇಶ್ ಶೆಟ್ಟಿ ಹಾಗೂ ಇತರರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ ಎಂಬ ವಿಚಾರವನ್ನು ನ್ಯಾಯಾಲಯದ ಮುಂದೆ ಇಟ್ಟಿದ್ದು ಆರೋಪಿಗಳಾಗಿ ನೋಟೀಸ್ ನೀಡಲಾಗಿದೆ ಎಂದು ವಾದಿಸಿದ್ದಾರೆ. ಈಗಾಗಲೇ ಇವರು ಸಾಕಷ್ಟು ವಿಚಾರಣೆ ಎದುರಿಸಿದ್ದಾರೆ ಎಫ್.ಐ.ಆರ್ ದಾಖಲಿಸಿರುವುದು ಸರಿಯಾಗಿಲ್ಲ ಎಂಬ ವಾದವನ್ನು ಮಂಡಿಸಿದರು. ವಿಚಾರಣೆ ಆಲಿಸಿದ ನ್ಯಾಯಾಲಯ ಅರ್ಜಿದಾರರ ವಿರುದ್ದದ ಎಫ್.ಐ.ಆರ್ ಗೆ ಮುಂದಿನ ವಿಚಾರಣೆಯ ವರೆಗೆ ತಡೆ ನೀಡಿ ವಿಚಾರಣೆಯನ್ನು ನ12 ಕ್ಕೆ ಮುಂದೂಡಿದ್ದಾರೆ.

Related posts

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಮಾ.31: ತಾ.ಪಂ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಸೇವಾ ನಿವೃತ್ತಿ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya
error: Content is protected !!