ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

ಧರ್ಮಸ್ಥಳ: ಭಾರತೀಯ ಜೀವವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ ಎಂ.ಜಿ. ಶೆಟ್ಟಿ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕೂಡಾ ವಿಮಾ ಏಜೆಂಟರುಗಳ ಮೂಲಕ ಅವರು ಜೀವವಿಮೆಯ ಮಹತ್ವದ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಿ ವಿಮೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದರು. ಧರ್ಮಸ್ಥಳದ ಎಲ್ಲಾ ಸಿಬ್ಬಂದಿಗಳಿಗೆ ವಿಮೆ ಮಾಡಿಸುವಲ್ಲಿ ಅವರು ವಿಶೇಷ ಸಹಕಾರ ನೀಡಿರುತ್ತಾರೆ. ನಮ್ಮ ಕ್ಷೇತ್ರದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.

ಧರ್ಮಸ್ಥಳದಲ್ಲಿ ಪ್ರತಿವರ್ಷ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸುವ ರಾಜ್ಯಮಟ್ಟದ ವಸ್ತುಪ್ರದರ್ಶನ ಸಮಿತಿಯ ಸದಸ್ಯರಾಗಿಯೂ ಅವರು ಉತ್ತಮ ಸೇವೆ ನೀಡಿದ್ದಾರೆ.ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಅವರ ಅಗಲುವಿಕೆಯಿಂದ ಕುಟುಂಬ-ವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.

Related posts

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya
error: Content is protected !!