September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

ಬೆಳ್ತಂಗಡಿ: ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಮಾಡಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು‌ ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅ.30 ರಂದು ಈ ಆದೇಶವನ್ನು ನೀಡಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಕಳೆದ ಅವಧಿಯ ಚುನಾವಣೆಯಲ್ಲಿ ಬೆಳ್ತಂಗಡಿಯ ಪಟ್ಟಣ ಪಂಚಾಯತ್‌ನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದ ರು. ಒಟ್ಟು ಐದು ವರ್ಷದ ಅಡಳಿತದಲ್ಲಿ ಪ್ರಥಮ ಅವಧಿಯ 30 ತಿಂಗಳ ಮೊದಲ ಅವಧಿಗೆ ಅಧ್ಯಕ್ಷರಾಗಿ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಟಿ. ಕಾರ್ಯನಿರ್ವಹಿಸಿದ್ದರು. ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿ ಪ್ರಕ್ರಿಯೆ ವಿಳಂಬಗೊಂಡು ಆಡಳಿತಾಧಿಕಾರಿಗಳು ಸರಿ ಸುಮಾರು 16 ತಿಂಗಳ ಕಾಲ ಕಾರ್ಯನಿರ್ವಹಿಸಿದರು. 2024ರಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡು ಕಳೆದ ಅಕ್ಟೋಬರ್‌ನಲ್ಲಿ ಜಯಾನಂದ ಗೌಡ ಟಿ. ಅಧ್ಯಕ್ಷರಾಗಿ ಹಾಗೂ ಕು| ಗೌರಿ ಉಪಾಧ್ಯರಾಗಿ ಆಯ್ಕೆಯಾಗಿದ್ದರು.

ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರ ಅವಧಿ 30 ತಿಂಗಳು ಆಗಿದ್ದರೂ, ಇದೀಗ ಇವರುಗಳ ಅಧಿಕಾರವಧಿ ಮೊಟಕುಗೊಂಡು ಒಂದು ವರ್ಷ ಮೂರು ತಿಂಗಳಲ್ಲಿ ಮುಕ್ತಾಯಗೊಳ್ಳುತ್ತಿದೆ. ಜೊತೆ ಪಂಚಾಯತದ ಎಲ್ಲಾ ಸದಸ್ಯರ ಅವಧಿಯೂ ನ.7ಕ್ಕೆ ಮುಕ್ತಾಯಗೊಳ್ಳಲಿದೆ. ಸರಕಾರ ಮೀಸಲಾತಿ ಪ್ರಕಟಗೊಳಿಸಲು ವಿಳಂಬ ಮಾಡಿರುವುದರಿಂದ ಚುನಾಯಿತ ಪ್ರತಿನಿಧಿಗಳು ತಮ್ಮ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಇದೀಗ ಅಧ್ಯಕ್ಷ ಜಯಾನಂದ ಗೌಡ ಅವರು ನ್ಯಾಯಾಲಯದ ಕಟಾಕಟೆಗೆ ಏರಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ಚುನಾಯಿತ ಸದಸ್ಯರ ಅಧಿಕಾವಧಿ ಮುಗಿಯುವವರೆಗೆ ಆಡಳಿತ ಅಧಿಕಾರಿ ನೇಮಿಸದಂತೆ ಒತ್ತಾಯಿಸಿ ಅಜಿ೯ ಸಲ್ಲಿಸಿದ್ದರು.

ಅಜಿ೯ಯ ವಿಚಾರಣೆ ನಡೆಸಿದ ನ್ಯಾಯಾಲಯ ಆಡಳಿತಾಧಿಕಾರಿ ನೇಮಕ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತದ ಚುನಾಯಿತ ಸದಸ್ಯರ ಅಧಿಕಾರವಧಿ ಮುಂದಿನ ಆದೇಶದವರೆಗೆಮುಂದುರಿಯಲಿದೆ.

40ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಿಂದ ಅರ್ಜಿ:

ಆಡಳಿತಾಧಿಕಾರಿಗಳ ಅವಧಿ ಪರಿಗಣಿಸಲು ಒತ್ತಾಯಿಸಿ ಎರಡನೇ ಅವಧಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನಲೆಯಲ್ಲಿ 16 ತಿಂಗಳ ಕಾಲ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದ ಅವಧಿಯನ್ನು ತಮ್ಮ ಐದು ವರ್ಷದ ಅಧಿಕಾರವಧಿಗೆ ಪರಿಗಣಿಸಬಾರದು ಮತ್ತು ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡುವ ಕ್ರಮಕ್ಕೆ ಮುಂದಾಗದಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ 40ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಪ್ರತ್ಯೇಕವಾಗಿ ಸಲ್ಲಿಕೆಯಾಗಿರುವ ಅರ್ಜಿಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

Related posts

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!