32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

ಮಡಂತ್ಯಾರು: ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಕ್ಷೇತ್ರದಲ್ಲಿರುವವರೆಲ್ಲರೂ ಒಂದೆಡೆ ಸೇರಿ ಚಳವಳಿಯ ಸಾಧನೆ, ಪ್ರಗತಿಯ ಅವಲೋಕನದ ಜೊತೆಗೆ ಸಾಧನೆ ಬಗ್ಗೆ ಹೆಮ್ಮೆ ಪಟ್ಟುಕೊಂಡು ಮುಂದಿನ ಬೆಳವಣಿಗೆ ಬಗ್ಗೆ ಚಿಂತನೆ ನಡೆಸಿ 72ನೇ ಸಹಕಾರಿ ಸಪ್ತಾಹವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರ ಬೇಕೆಂದು ಮಡಂತ್ಯಾರು ಸಹಕಾರಿ ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ ಹೇಳಿದರು.

ಅವರು ಅ.29ರಂದು ಮಡಂತ್ಯಾರು ಸಿಎ ಬ್ಯಾಂಕಿನ ಸಭಾ ಭವನದಲ್ಲಿ ಅಖಿಲಾ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನ.೧೪ರಂದು ಜಿಲ್ಲಾ ಮಟ್ಟದ ಸಪ್ತಾಹ ಕಾರ್ಯಕ್ರಮವದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ಈಗಾಗಲೇ ಕಾರ್ಯಕ್ರಮದ ರೂಪುರೇಷೆ ಸಿದ್ದಪಡಿಸಲಾಗಿದೆ ಎಂದರು.

ವೇದಿಕೆಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ, ಸಹಕಾರಿ ಯೂನಿಯನ್ ನಿರ್ದೇಶಕ ಸತೀಶ್ ಕಾಶಿಪಟ್ಣ, ದಕ ಜಿಲ್ಲಾ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಪ್ರಭಾಕರ ಹುಲಿಮೇರು, ಸಹಕಾರಿ ಯೂನಿಯನ್ ಸಿಇಓ ಹೀರೆಮಠ್, ಮಡಂತ್ಯಾರು ಸಹಕಾರಿ ಸಂಘದ ಉಪಾಧ್ಯಕ್ಷ ಕಾಂತಪ್ಪ ಗೌಡ, ಸಿಇಓ ಜೋಕಿಂ ಡಿಸೋಜ, ವಿವಿಧ ಸೊಸೈಟಿಯ ಅಧ್ಯಕ್ಷರು,ನಿರ್ದೇಶಕರುಗಳು,ಸಿಇಓ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.

ಮಡಂತ್ಯಾರು ಸಿಎ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿಗಳು ಸಹಕರಿಸಿದರು

Related posts

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya
error: Content is protected !!