37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ವ್ಯಾಪ್ತಿಯ ಹಿತ್ತಿಲಬೈಲು ಎಂಬಲ್ಲಿ ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೂತನ ಹಿಂದೂ ರುದ್ರ ಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಅ.30 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ರಾವ್ ವೈಧಿಕ ವಿಧಿ ವಿಧಾನ ನೇರವೇರಿಸಿದರು.

ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್ ಮಾತನಾಡಿ 2023-24ನೇ ಸಾಲಿನ 15ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಕಟ್ಟಡದ ಕಾಮಗಾರಿಯನ್ನು ಪ್ರಾರಂಭಿಸಿದ್ದು ಮುಂದೆ ಮೂಲಭೂತ ಸೌಕರ್ಯಗಳಾದ ಕಟ್ಟಿಗೆ ದಾಸ್ತಾನು, ಸ್ನಾನಗೃಹ ಮತ್ತು ಶೌಚಾಲಯ ಹಾಗೂ ಸುತ್ತ ತಡೆಗೋಡೆ ನಿರ್ಮಾಣವಾಗಲಿದೆ. ಇಲ್ಲಿ ರುದ್ರಭೂಮಿ ನಿರ್ಮಾಣವಾಗಿರುವುದರಿಂದ ಮಾಲಾಡಿ ಹಾಗೂ ಸೋಣಂದೂರು ಗ್ರಾಮಗಳ ನಾಗರಿಕರಿಗೆ ಅನುಕೂಲವಾಗಿದೆ.

ಈ ಕಾಮಗಾರಿಗಳಿಗೆ ಸಂಘ ಸಂಸ್ಥೆಗಳ ಹಾಗೂ ದಾನಿಗಳನ್ನು ಸಹಕಾರವನ್ನು ಯಾಚಿಸುತ್ತಾ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಹಿಂದೂ ರುದ್ರ ಭೂಮಿ 1 ಎಕ್ರೆ 66 ಸೆಂಟ್ಸ್ ಜಾಗದಲ್ಲಿದ್ದು ಈಗಾಗಲೇ ಅಂದಾಜು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಹಿಂದೂ ರುದ್ರ ಭೂಮಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಉಪಾಧ್ಯಕ್ಷ ಸೆಲೆಸ್ತೀನ್ ಡಿಸೋಜ, ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ ಸುವರ್ಣ, ಸುಧಾಕರ್ ಆಳ್ವ, ಉಮೇಶ್, ಜಯಂತಿ, ವಸಂತ ಪೂಜಾರಿ, ಬೇಬಿ ಸುಸ್ಸಾನ, ವಿದ್ಯಾ ಪಿ.ಸಾಲಿಯಾನ್, ರುಬಿನಾ, ತುಳಸಿ ಬಿ. ಹಾಗೂ ಬೆನೆಡಿಕ್ಟ್ ಮಿರಾಂದ, ಪಿಡಿಒ ಕೆ.ರಾಜಶೇಖರ್ ರೈ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ , ರವಿಶಂಕರ್ ಶೆಟ್ಟಿ ಹಾಗೂ ಜಗನ್ನಾಥ ಶೆಟ್ಟಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya
error: Content is protected !!