July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ವ್ಯಾಪ್ತಿಯ ಹಿತ್ತಿಲಬೈಲು ಎಂಬಲ್ಲಿ ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೂತನ ಹಿಂದೂ ರುದ್ರ ಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಅ.30 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ರಾವ್ ವೈಧಿಕ ವಿಧಿ ವಿಧಾನ ನೇರವೇರಿಸಿದರು.

ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್ ಮಾತನಾಡಿ 2023-24ನೇ ಸಾಲಿನ 15ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಕಟ್ಟಡದ ಕಾಮಗಾರಿಯನ್ನು ಪ್ರಾರಂಭಿಸಿದ್ದು ಮುಂದೆ ಮೂಲಭೂತ ಸೌಕರ್ಯಗಳಾದ ಕಟ್ಟಿಗೆ ದಾಸ್ತಾನು, ಸ್ನಾನಗೃಹ ಮತ್ತು ಶೌಚಾಲಯ ಹಾಗೂ ಸುತ್ತ ತಡೆಗೋಡೆ ನಿರ್ಮಾಣವಾಗಲಿದೆ. ಇಲ್ಲಿ ರುದ್ರಭೂಮಿ ನಿರ್ಮಾಣವಾಗಿರುವುದರಿಂದ ಮಾಲಾಡಿ ಹಾಗೂ ಸೋಣಂದೂರು ಗ್ರಾಮಗಳ ನಾಗರಿಕರಿಗೆ ಅನುಕೂಲವಾಗಿದೆ.

ಈ ಕಾಮಗಾರಿಗಳಿಗೆ ಸಂಘ ಸಂಸ್ಥೆಗಳ ಹಾಗೂ ದಾನಿಗಳನ್ನು ಸಹಕಾರವನ್ನು ಯಾಚಿಸುತ್ತಾ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಹಿಂದೂ ರುದ್ರ ಭೂಮಿ 1 ಎಕ್ರೆ 66 ಸೆಂಟ್ಸ್ ಜಾಗದಲ್ಲಿದ್ದು ಈಗಾಗಲೇ ಅಂದಾಜು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಹಿಂದೂ ರುದ್ರ ಭೂಮಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಉಪಾಧ್ಯಕ್ಷ ಸೆಲೆಸ್ತೀನ್ ಡಿಸೋಜ, ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ ಸುವರ್ಣ, ಸುಧಾಕರ್ ಆಳ್ವ, ಉಮೇಶ್, ಜಯಂತಿ, ವಸಂತ ಪೂಜಾರಿ, ಬೇಬಿ ಸುಸ್ಸಾನ, ವಿದ್ಯಾ ಪಿ.ಸಾಲಿಯಾನ್, ರುಬಿನಾ, ತುಳಸಿ ಬಿ. ಹಾಗೂ ಬೆನೆಡಿಕ್ಟ್ ಮಿರಾಂದ, ಪಿಡಿಒ ಕೆ.ರಾಜಶೇಖರ್ ರೈ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ , ರವಿಶಂಕರ್ ಶೆಟ್ಟಿ ಹಾಗೂ ಜಗನ್ನಾಥ ಶೆಟ್ಟಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya
error: Content is protected !!