July 23, 2026
ಸಾಧಕರು

ಹೆಮ್ಮೆಯ ಕನ್ನಡಿಗ ‘ರಾಷ್ಟ್ರಪ್ರಶಸ್ತಿ’ಗೆ ಲ| ಡಾ.ಗೋಪಾಲಕೃಷ್ಣ ಕಾಂಚೋಡು ಆಯ್ಕೆ

ಬೆಳ್ತಂಗಡಿ: ಪ್ರಗತಿಪರ ಕೃಷಿಕ ಹಾಗೂ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಲ| ಡಾ.ಗೋಪಾಲಕೃಷ್ಣ ಕಾಂಚೋಡು ಅವರು ಬೆಂಗಳೂರಿನ ಪ್ರಿಯದರ್ಶಿನಿ ಗ್ರಾಮೀಣ ಅಭಿವೃದ್ಧಿ ಫೌಂಡೇಶನ್ ಕರ್ನಾಟಕ ರಾಜ್ಯ ನಾಮಕರಣ 52ನೇ ವರ್ಷದ ಸುವರ್ಣ ವರ್ಷಾಚರಣೆ ಅಂಗವಾಗಿ, 71ನೇ ಕರ್ನಾಟಕ ರಾಜ್ಯೋತ್ಸವದ ಶುಭಸಂದರ್ಭದಲ್ಲಿ ನೀಡುವ ‘ಹೆಮ್ಮೆಯ ಕನ್ನಡಿಗ’ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ.24ರಂದು ಬೆಂಗಳೂರಿನ ರಂಗಮಂದಿರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕನ್ನಡ ರಾಜೋತ್ಸವ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಕಾಂಚೋಡು ಅವರಿಗೆ ಈ ಪ್ರಶಸ್ತಿಯನ್ನು ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಡಾ. ಗೋಪಾಲಕೃಷ್ಣ ಕಾಂಚೋಡು ಅವರು ಪ್ರಗತಿಪರ ಸಾವಯವ ಕೃಷಿಕರಾಗಿದ್ದು, ಎ.ಕೆ.ಎಂ.ಎಸ್.ಎಸ್‌ನ ಜಿಲ್ಲಾ ಗೌರವಾಧ್ಯಕ್ಷರಾಗಿ, ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸದಸ್ಯರಾಗಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಇವರು ‘ಜೈಜವಾನ್ ಜೈ ಕಿಸಾನ್’ ರಾಷ್ಟ್ರಮಟ್ಟದ ಪ್ರಶಸ್ತಿ ಹಾಗೂ ‘ಕರಾವಳಿ ರತ್ನ’ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದಾರೆ.

Related posts

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!