September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

ಬೆಳ್ತಂಗಡಿ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ನ ನಿಕಟ ಪೂರ್ವ ಅಧ್ಯಕ್ಷ ಡಾ. ರವಿ ಕಕ್ಕೆಪದವು ಅವರಿಗೆ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷ ಚಿತ್ರ ಕುಮಾರ್ ಅವರು ಸುಬ್ರಹ್ಮಣ್ಯದಲ್ಲಿ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಿದರು.

ಡಾ.ರವಿ ಕಕ್ಕೆಪದವು ಅವರು ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಡವರಿಗೆ ಹಾಗೂ ಸೂರು ಇಲ್ಲದವರಿಗೆ ಮನೆ ಶೌಚಾಲಯ ನಿರ್ಮಿಸಿಕೊಟ್ಟವರು. ಅಲ್ಲದೆ ಬಡಬಗ್ಗರಿಗೆ ಅಕ್ಕಿ, ವಸ್ತ್ರದಾನ, ಇನ್ನಿತರ ದವಸ ಧಾನ್ಯಗಳನ್ನ ದಾನವಾಗಿ ನೀಡುತ್ತಾ ಬಂದವರು. ಹಾಗೆ ಕುಕ್ಕೆ ಸುಬ್ರಹ್ಮಣ್ಯದ ಪವಿತ್ರ ಕ್ಷೇತ್ರದಲ್ಲಿ ಪ್ರತಿವಾರ ರವಿವಾರ ಸ್ವಚ್ಛತಾ ಕಾರ್ಯಕ್ರಮವನ್ನು ತನ್ನೆಲ್ಲ ಸಮಾಜ ಸೇವ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ನ ಸದಸ್ಯರ ಒಳಗೋಡಿ ನಿರಂತರವಾಗಿ ಮಾಡುತ್ತಾ ಬಂಧುದನ್ನ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ ಅಧ್ಯಕ್ಷ ವೆಂಕಟೇಶ್ ಎಚ್ ಎಲ್ ಕಾರ್ಯದರ್ಶಿ ಗೋಪಾಲ ಎಣ್ಣೆ ಮಜಲ್ ಕೋಶಾಧಿಕಾರಿ ಮೋನಪ್ಪ ಡಿ ನಿರ್ದೇಶಕರುಗಳಾದ ಪ್ರಕಾಶ್ ಕಟ್ಟೆಮನೆ, ಚಂದ್ರಶೇಖರ ನಾಯರ್, ಮಾಧವ ದೇವರ ಗದ್ದೆ, ಅಶೋಕ್ ಕುಮಾರ್ ಮೂಲೆ ಮಜಲು, ದೀಪಕ್ ನಂಬಿಯಾರ್ ಮುಂತಾದವರು ಹಾಜರಿದ್ದರು.

Related posts

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya
error: Content is protected !!