September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ 12 ಸ್ಥಾನಗಳಿಗೆ ಚುನಾವಣೆ ಸಿದ್ದಗೊಂಡಿದ್ದು 24ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಬಾರ್ಯ ಪರಿಸರದಲ್ಲಿ ಚುನಾವಣೆಯ ಕಾವು ಈಗಾಗಲೇ ಪಸರಿಸಿದ್ದು 1322 ಮಂದಿ ಮತದಾರರಿದ್ದು ನ.೫ರಂದು ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮತದಾನ ನಡೆಯಲಿದೆ.

ಅ.25ರಂದು ನಾಮಪತ್ರ ಸಲ್ಲಿಕೆಯಾಗಿ, ಅ.29ರಂದು ಪರಿಶೀಲನೆಗೊಂಡು ಅ.30ರಂದು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದ್ದು ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 12 ಮಂದಿ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 12 ಮಂದಿ ಅಭ್ಯರ್ಥಿಗಳು ನಡುವೆ ಪೈಪೋಟಿ ನಡೆಯಲಿದೆ.

ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಸಾಮಾನ್ಯ ಸ್ಥಾನದಿಂದ 6 ಮಂದಿ, ಅನುಸೂಚಿತ ಜಾತಿ ಹಾಗೂ ಪಂಗಡ ಮೀಸಲುವಿನಿಂದ, ಹಿಂದುಳಿದ ವರ್ಗ “ಎ” ಹಾಗೂ “ಬಿ” ಮೀಸಲು ಸ್ಥಾನದಿಂದ ತಲಾ ಒಂದರಂತೆ ಹಾಗೂ ಮಹಿಳಾ ಮೀಸಲು ಎರಡು ಸ್ಥಾನಗಳಿಗೆ ಸ್ಪರ್ಧೆ ಏರ್ಪಟ್ಟಿದೆ.

ಸಾಮಾನ್ಯ ಸ್ಥಾನದಿಂದ ಆಶ್ರಫ್, ಪಿ.ಕೆ. ಉಸ್ಮಾನ್, ಗುರುಪ್ರಸಾದ್, ಚಂದ್ರಶೇಖರ್ ಕುಂಡಡ್ಕ, ಚಂದ್ರಶೇಖರ ಪೊರ್ಕಳ, ಪ್ರವೀಣ್ ರೈ, ಪ್ರಸನ್ನ ಗೌಡ, ಪ್ರಶಾಂತ್ ಪೈ ಎ, ಬಾಲಕೃಷ್ಣ ಶೆಟ್ಟಿ, ಶಿವಪ್ರಸಾದ್, ಮೋಹನ್ ಗೌಡ, ಹರ್ಷಿತ್ ಕೆ, ಹಿಂದುಳಿದ ವರ್ಗ “ಎ”ನಿಂದ ಶೀಧರ್ ಎನ್ ಮತ್ತು ಶೇಷಪ್ಪ ಸಾಲಿಯಾನ್, ಹಿಂದುಳಿದ ವರ್ಗ “ಬಿ”ನಿಂದ ಕಾಂತಪ್ಪ ಗೌಡ ಮತ್ತು ರಾಜೇಶ್ ರೈ, ಪರಿಶಿಷ್ಟ ಪಂಗಡದಿಂದ ಪುಷ್ಪಾ ಮತ್ತು ಶಿವಾರಮ್, ಪರಿಶಿಷ್ಟ ಜಾತಿಯಿಂದ ಜಯಂತಿ ಮತ್ತು ಸುರೇಶ ಸುಣ್ಣಾಜೆ ಮಹಿಳಾ ಮೀಸಲು ಕ್ಷೇತ್ರದಿಂದ ಉಷಾ, ಸರೋಜಿನಿ, ಸವಿತಾ ಹಾಗೂ ಹೇಮಾವತಿ ಅವರುಗಳ ನಡುವೆ ಪೈಪೋಟಿ ನಡೆಯಲಿದೆ.

Related posts

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya
error: Content is protected !!