22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

ಬೆಳ್ತಂಗಡಿ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ನ ನಿಕಟ ಪೂರ್ವ ಅಧ್ಯಕ್ಷ ಡಾ. ರವಿ ಕಕ್ಕೆಪದವು ಅವರಿಗೆ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷ ಚಿತ್ರ ಕುಮಾರ್ ಅವರು ಸುಬ್ರಹ್ಮಣ್ಯದಲ್ಲಿ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಿದರು.

ಡಾ.ರವಿ ಕಕ್ಕೆಪದವು ಅವರು ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಡವರಿಗೆ ಹಾಗೂ ಸೂರು ಇಲ್ಲದವರಿಗೆ ಮನೆ ಶೌಚಾಲಯ ನಿರ್ಮಿಸಿಕೊಟ್ಟವರು. ಅಲ್ಲದೆ ಬಡಬಗ್ಗರಿಗೆ ಅಕ್ಕಿ, ವಸ್ತ್ರದಾನ, ಇನ್ನಿತರ ದವಸ ಧಾನ್ಯಗಳನ್ನ ದಾನವಾಗಿ ನೀಡುತ್ತಾ ಬಂದವರು. ಹಾಗೆ ಕುಕ್ಕೆ ಸುಬ್ರಹ್ಮಣ್ಯದ ಪವಿತ್ರ ಕ್ಷೇತ್ರದಲ್ಲಿ ಪ್ರತಿವಾರ ರವಿವಾರ ಸ್ವಚ್ಛತಾ ಕಾರ್ಯಕ್ರಮವನ್ನು ತನ್ನೆಲ್ಲ ಸಮಾಜ ಸೇವ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ನ ಸದಸ್ಯರ ಒಳಗೋಡಿ ನಿರಂತರವಾಗಿ ಮಾಡುತ್ತಾ ಬಂಧುದನ್ನ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ ಅಧ್ಯಕ್ಷ ವೆಂಕಟೇಶ್ ಎಚ್ ಎಲ್ ಕಾರ್ಯದರ್ಶಿ ಗೋಪಾಲ ಎಣ್ಣೆ ಮಜಲ್ ಕೋಶಾಧಿಕಾರಿ ಮೋನಪ್ಪ ಡಿ ನಿರ್ದೇಶಕರುಗಳಾದ ಪ್ರಕಾಶ್ ಕಟ್ಟೆಮನೆ, ಚಂದ್ರಶೇಖರ ನಾಯರ್, ಮಾಧವ ದೇವರ ಗದ್ದೆ, ಅಶೋಕ್ ಕುಮಾರ್ ಮೂಲೆ ಮಜಲು, ದೀಪಕ್ ನಂಬಿಯಾರ್ ಮುಂತಾದವರು ಹಾಜರಿದ್ದರು.

Related posts

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya
error: Content is protected !!