25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಅ.30ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ ಮಾತನಾಡಿ ಶಾಲೆಯ ಸರ್ವಾಂಗೀಣ ಬೆಳವಣಿಗೆ ಮತ್ತು ನಮ್ಮ ವರ್ತನೆ ಸಮಾಜದಲ್ಲಿ ಹೇಗಿರಬೇಕೆಂದು ತಿಳಿಸಿದರು.

ಮಗುವಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಎಸ್.ಡಿ.ಎಮ್ ಸಿ ಶಿಕ್ಷಣ ತಜ್ಞರಾದ ಟಿ.ಪಿ ಆಂಟನಿ ಯವರು ತಿಳಿಸಿದರು. ನೊಡೆಲ್ ಅಧಿಕಾರಿಯಾದ ಶ್ರೀಮತಿ ವಿನೋದ ಶಿಕ್ಷಕರು, ವಿದ್ಯಾರ್ಥಿಗಳ ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಮತ್ತು ಮಗುವಿನ ಶೈಕ್ಷಣೀಕ ಪ್ರಗತಿಯ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ವೇದಾವತಿ, ಎಸ್.ಡಿ.ಎಮ್.ಸಿ ಸದಸ್ಯರು, ಮುಖ್ಯ ಶಿಕ್ಷಕರು , ಅಧ್ಯಾಪಕ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಮುಖ್ಯ ಶಿಕ್ಷಕಿ ರೋಹಿಣಿ ಕೆ ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು.

ಕಳೆದ ವರ್ಷ 7ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವನ್ನು ವಿತರಿಸಲಾಯಿತು.

ಶಿಕ್ಷಕಿ ಶೀಲಾವತಿ ಕಾರ್ಯಕ್ರಮ ನಿರ್ವಹಿಸಿ , ಶೃತಿ ಧನ್ಯವಾದವಿತ್ತರು.

Related posts

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!