24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ 12 ಸ್ಥಾನಗಳಿಗೆ ಚುನಾವಣೆ ಸಿದ್ದಗೊಂಡಿದ್ದು 24ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಬಾರ್ಯ ಪರಿಸರದಲ್ಲಿ ಚುನಾವಣೆಯ ಕಾವು ಈಗಾಗಲೇ ಪಸರಿಸಿದ್ದು 1322 ಮಂದಿ ಮತದಾರರಿದ್ದು ನ.೫ರಂದು ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮತದಾನ ನಡೆಯಲಿದೆ.

ಅ.25ರಂದು ನಾಮಪತ್ರ ಸಲ್ಲಿಕೆಯಾಗಿ, ಅ.29ರಂದು ಪರಿಶೀಲನೆಗೊಂಡು ಅ.30ರಂದು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದ್ದು ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 12 ಮಂದಿ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 12 ಮಂದಿ ಅಭ್ಯರ್ಥಿಗಳು ನಡುವೆ ಪೈಪೋಟಿ ನಡೆಯಲಿದೆ.

ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಸಾಮಾನ್ಯ ಸ್ಥಾನದಿಂದ 6 ಮಂದಿ, ಅನುಸೂಚಿತ ಜಾತಿ ಹಾಗೂ ಪಂಗಡ ಮೀಸಲುವಿನಿಂದ, ಹಿಂದುಳಿದ ವರ್ಗ “ಎ” ಹಾಗೂ “ಬಿ” ಮೀಸಲು ಸ್ಥಾನದಿಂದ ತಲಾ ಒಂದರಂತೆ ಹಾಗೂ ಮಹಿಳಾ ಮೀಸಲು ಎರಡು ಸ್ಥಾನಗಳಿಗೆ ಸ್ಪರ್ಧೆ ಏರ್ಪಟ್ಟಿದೆ.

ಸಾಮಾನ್ಯ ಸ್ಥಾನದಿಂದ ಆಶ್ರಫ್, ಪಿ.ಕೆ. ಉಸ್ಮಾನ್, ಗುರುಪ್ರಸಾದ್, ಚಂದ್ರಶೇಖರ್ ಕುಂಡಡ್ಕ, ಚಂದ್ರಶೇಖರ ಪೊರ್ಕಳ, ಪ್ರವೀಣ್ ರೈ, ಪ್ರಸನ್ನ ಗೌಡ, ಪ್ರಶಾಂತ್ ಪೈ ಎ, ಬಾಲಕೃಷ್ಣ ಶೆಟ್ಟಿ, ಶಿವಪ್ರಸಾದ್, ಮೋಹನ್ ಗೌಡ, ಹರ್ಷಿತ್ ಕೆ, ಹಿಂದುಳಿದ ವರ್ಗ “ಎ”ನಿಂದ ಶೀಧರ್ ಎನ್ ಮತ್ತು ಶೇಷಪ್ಪ ಸಾಲಿಯಾನ್, ಹಿಂದುಳಿದ ವರ್ಗ “ಬಿ”ನಿಂದ ಕಾಂತಪ್ಪ ಗೌಡ ಮತ್ತು ರಾಜೇಶ್ ರೈ, ಪರಿಶಿಷ್ಟ ಪಂಗಡದಿಂದ ಪುಷ್ಪಾ ಮತ್ತು ಶಿವಾರಮ್, ಪರಿಶಿಷ್ಟ ಜಾತಿಯಿಂದ ಜಯಂತಿ ಮತ್ತು ಸುರೇಶ ಸುಣ್ಣಾಜೆ ಮಹಿಳಾ ಮೀಸಲು ಕ್ಷೇತ್ರದಿಂದ ಉಷಾ, ಸರೋಜಿನಿ, ಸವಿತಾ ಹಾಗೂ ಹೇಮಾವತಿ ಅವರುಗಳ ನಡುವೆ ಪೈಪೋಟಿ ನಡೆಯಲಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya
error: Content is protected !!