24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ 12 ಸ್ಥಾನಗಳಿಗೆ ಚುನಾವಣೆ ಸಿದ್ದಗೊಂಡಿದ್ದು 24ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಬಾರ್ಯ ಪರಿಸರದಲ್ಲಿ ಚುನಾವಣೆಯ ಕಾವು ಈಗಾಗಲೇ ಪಸರಿಸಿದ್ದು 1322 ಮಂದಿ ಮತದಾರರಿದ್ದು ನ.೫ರಂದು ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮತದಾನ ನಡೆಯಲಿದೆ.

ಅ.25ರಂದು ನಾಮಪತ್ರ ಸಲ್ಲಿಕೆಯಾಗಿ, ಅ.29ರಂದು ಪರಿಶೀಲನೆಗೊಂಡು ಅ.30ರಂದು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದ್ದು ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 12 ಮಂದಿ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 12 ಮಂದಿ ಅಭ್ಯರ್ಥಿಗಳು ನಡುವೆ ಪೈಪೋಟಿ ನಡೆಯಲಿದೆ.

ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಸಾಮಾನ್ಯ ಸ್ಥಾನದಿಂದ 6 ಮಂದಿ, ಅನುಸೂಚಿತ ಜಾತಿ ಹಾಗೂ ಪಂಗಡ ಮೀಸಲುವಿನಿಂದ, ಹಿಂದುಳಿದ ವರ್ಗ “ಎ” ಹಾಗೂ “ಬಿ” ಮೀಸಲು ಸ್ಥಾನದಿಂದ ತಲಾ ಒಂದರಂತೆ ಹಾಗೂ ಮಹಿಳಾ ಮೀಸಲು ಎರಡು ಸ್ಥಾನಗಳಿಗೆ ಸ್ಪರ್ಧೆ ಏರ್ಪಟ್ಟಿದೆ.

ಸಾಮಾನ್ಯ ಸ್ಥಾನದಿಂದ ಆಶ್ರಫ್, ಪಿ.ಕೆ. ಉಸ್ಮಾನ್, ಗುರುಪ್ರಸಾದ್, ಚಂದ್ರಶೇಖರ್ ಕುಂಡಡ್ಕ, ಚಂದ್ರಶೇಖರ ಪೊರ್ಕಳ, ಪ್ರವೀಣ್ ರೈ, ಪ್ರಸನ್ನ ಗೌಡ, ಪ್ರಶಾಂತ್ ಪೈ ಎ, ಬಾಲಕೃಷ್ಣ ಶೆಟ್ಟಿ, ಶಿವಪ್ರಸಾದ್, ಮೋಹನ್ ಗೌಡ, ಹರ್ಷಿತ್ ಕೆ, ಹಿಂದುಳಿದ ವರ್ಗ “ಎ”ನಿಂದ ಶೀಧರ್ ಎನ್ ಮತ್ತು ಶೇಷಪ್ಪ ಸಾಲಿಯಾನ್, ಹಿಂದುಳಿದ ವರ್ಗ “ಬಿ”ನಿಂದ ಕಾಂತಪ್ಪ ಗೌಡ ಮತ್ತು ರಾಜೇಶ್ ರೈ, ಪರಿಶಿಷ್ಟ ಪಂಗಡದಿಂದ ಪುಷ್ಪಾ ಮತ್ತು ಶಿವಾರಮ್, ಪರಿಶಿಷ್ಟ ಜಾತಿಯಿಂದ ಜಯಂತಿ ಮತ್ತು ಸುರೇಶ ಸುಣ್ಣಾಜೆ ಮಹಿಳಾ ಮೀಸಲು ಕ್ಷೇತ್ರದಿಂದ ಉಷಾ, ಸರೋಜಿನಿ, ಸವಿತಾ ಹಾಗೂ ಹೇಮಾವತಿ ಅವರುಗಳ ನಡುವೆ ಪೈಪೋಟಿ ನಡೆಯಲಿದೆ.

Related posts

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya
error: Content is protected !!