25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

ಮುಂಡಾಜೆ ಗ್ರಾಮ ಪಂಚಾಯತ್ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ವಿದ್ಯಾರ್ಥಿಗಳ, ಸಹಯೋಗದೊಂದಿಗೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಅ.30 ರಂದು ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಡ ಶಾಲೆಯಲ್ಲಿ ನಡೆಯಿತು.


ಗ್ರಾಮ ಪಂಚಾಯತಿ ಅಧ್ಯಕ್ಷ ಕೆ ಗಣೇಶ್ ಬಂಗೇರ ರವರ ಉದ್ಘಾಟನೆ ನೆರವೇರಿಸಿ, ಮಾಹಿತಿ ಯೊಂದಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಸಿ ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆದು ಮುಂದಿನ, ಪೀಳಿಗೆಗೆ ಪರಿಚಯಿಸುವ ಮಾದಕ ವಸ್ತುಗಳ ಸೇವನೆಗಳಿಂದ ದೂರ ಮಾಡುವ ಉತ್ತಮ ಸಮಾಜ ನಿರ್ಮಾಣಕ್ಕೆ ಮಕ್ಕಳ ಅಭಿವೃದ್ದಿ ಮನ ಪರಿವರ್ತನೆ ಗೆ ನೀತಿ ಬೋಧಕ ವಾಕ್ಯ ರಚನೆ ಮತ್ತು ಅರಿಯೂ ಮೂಡಿಸುವ ನಿಟ್ಟಿನಲ್ಲಿ ಬಿತ್ತಿ ಚಿತ್ರದ ಮೂಲಕ ರಚಿಸುವ ಸ್ಪರ್ಧೆ ಗಳನ್ನು ಏರ್ಪಡಿಸಿ ವಿಮರ್ಶೆ ಬರೆದು ಜಾಗೃತಿ ಕರಪತ್ರದೊಂದಿಗೆ ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ ವಿಧಿ ಸ್ವೀಕರಿಸಿ ಕಾರ್ಯಕ್ರಮ ನಡೆಸಿ ಮಕ್ಕಳಿಗೆ ಸ್ಫರ್ಧೆ ಗಳಲ್ಲಿ ಜಾಗೃತಿ ಕರಪತ್ರ ದೊಂದಿಗೆ ವಿಚೇತ ರಿಗೆ ಬಹುಮಾನ ವಿತರಣೆ ಹಾಗೂ ಅರಿವು ಮಾಹಿತಿ ಕಾರ್ಯಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ದೈಹಿಕ ಶಿಕ್ಷಕ ಶೀನಪ್ಪ ಗೌಡ ಮತ್ತು ಸುರೇಶ ಮಕ್ಕಳಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ಜಾಗೃತಿ ಮೂಡಿಸಿದರು. ವಿದ್ಯಾವರ್ಧಕ ಪ್ರೌಡ ಶಾಲೆ ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ರವರು ಅನಿಸಿಕೆ ವ್ಯಕ್ತ ಪಡಿಸಿದರು.
ಮುಂಡಾಜೆ, ಗ್ರಾಮ ಪಂಚಾಯತ್ ಪುನರ್ ವಸತಿ ಕಾರ್ಯ ವಿಭಾಗದ, ಮಜೀದ್ ರವರು ಪ್ರಸ್ತಾವನೆ ಗೈದು ಮಾದಕ ದ್ರವ್ಯ ಮತ್ತು ಮಕ್ಕಳ ಮೇಲೆ ಆಗುವ ದುಷ್ಪರಿಣಾಮ ಕುರಿತಾದ ಅಭಿಯಾನದ ಉದ್ದೇಶದ ಬಗ್ಗೆ ವಿವರಣೆ ನೀಡಿದರು. ಸಮಾಜ ಕಾರ್ಯ ವಿಭಾಗ ವಿಧ್ಯಾರ್ಥಿ ಗಳಾದ ವಿಜೇತ, ಯಶ್ಮಿತ, ಅಭಿಷೇಕ್, ಕೆ. ಬ್ಬರತ್, ವಂದಿತ ಪ್ರಭು, ಸಭಾ ನಡವಳಿಗಳನ್ನೂ, ನಡೆಸಿಕೊಟ್ಟರು. ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ವಿವೇಕಾನಂದ ವಿದ್ಯಾವರ್ಧಕ ಶಾಲಾ ಸಹ ಶಿಕ್ಷಕರು. ಸಿಬ್ಬಂದಿಗಳು ಉಪಸ್ಥಿತರಿದ್ದು,ಸಹಕರಿಸಿದರು.
ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗ ಗ್ರಾಮ ಪಂಚಾಯಿತಿ ಮುಂಡಾಜೆ ಹಾಗೂ ಯಂಗ್ ಚಾಲೆಂಜರ್ಸ್ ವತಿಯಿಂದ
ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ವಿಶೇಷ ಸಹಕಾರ ಅಗತ್ಯ ನೆರವು ನೀಡುವ ಮೂಲಕ ಜಾಗೃತಿ ಮೂಡಿಸಿದರು.

Related posts

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!