September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

ಬೆಳ್ತಂಗಡಿ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ನ ನಿಕಟ ಪೂರ್ವ ಅಧ್ಯಕ್ಷ ಡಾ. ರವಿ ಕಕ್ಕೆಪದವು ಅವರಿಗೆ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷ ಚಿತ್ರ ಕುಮಾರ್ ಅವರು ಸುಬ್ರಹ್ಮಣ್ಯದಲ್ಲಿ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಿದರು.

ಡಾ.ರವಿ ಕಕ್ಕೆಪದವು ಅವರು ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಡವರಿಗೆ ಹಾಗೂ ಸೂರು ಇಲ್ಲದವರಿಗೆ ಮನೆ ಶೌಚಾಲಯ ನಿರ್ಮಿಸಿಕೊಟ್ಟವರು. ಅಲ್ಲದೆ ಬಡಬಗ್ಗರಿಗೆ ಅಕ್ಕಿ, ವಸ್ತ್ರದಾನ, ಇನ್ನಿತರ ದವಸ ಧಾನ್ಯಗಳನ್ನ ದಾನವಾಗಿ ನೀಡುತ್ತಾ ಬಂದವರು. ಹಾಗೆ ಕುಕ್ಕೆ ಸುಬ್ರಹ್ಮಣ್ಯದ ಪವಿತ್ರ ಕ್ಷೇತ್ರದಲ್ಲಿ ಪ್ರತಿವಾರ ರವಿವಾರ ಸ್ವಚ್ಛತಾ ಕಾರ್ಯಕ್ರಮವನ್ನು ತನ್ನೆಲ್ಲ ಸಮಾಜ ಸೇವ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ನ ಸದಸ್ಯರ ಒಳಗೋಡಿ ನಿರಂತರವಾಗಿ ಮಾಡುತ್ತಾ ಬಂಧುದನ್ನ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ ಅಧ್ಯಕ್ಷ ವೆಂಕಟೇಶ್ ಎಚ್ ಎಲ್ ಕಾರ್ಯದರ್ಶಿ ಗೋಪಾಲ ಎಣ್ಣೆ ಮಜಲ್ ಕೋಶಾಧಿಕಾರಿ ಮೋನಪ್ಪ ಡಿ ನಿರ್ದೇಶಕರುಗಳಾದ ಪ್ರಕಾಶ್ ಕಟ್ಟೆಮನೆ, ಚಂದ್ರಶೇಖರ ನಾಯರ್, ಮಾಧವ ದೇವರ ಗದ್ದೆ, ಅಶೋಕ್ ಕುಮಾರ್ ಮೂಲೆ ಮಜಲು, ದೀಪಕ್ ನಂಬಿಯಾರ್ ಮುಂತಾದವರು ಹಾಜರಿದ್ದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya
error: Content is protected !!