25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ 12 ಸ್ಥಾನಗಳಿಗೆ ಚುನಾವಣೆ ಸಿದ್ದಗೊಂಡಿದ್ದು 24ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಬಾರ್ಯ ಪರಿಸರದಲ್ಲಿ ಚುನಾವಣೆಯ ಕಾವು ಈಗಾಗಲೇ ಪಸರಿಸಿದ್ದು 1322 ಮಂದಿ ಮತದಾರರಿದ್ದು ನ.೫ರಂದು ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮತದಾನ ನಡೆಯಲಿದೆ.

ಅ.25ರಂದು ನಾಮಪತ್ರ ಸಲ್ಲಿಕೆಯಾಗಿ, ಅ.29ರಂದು ಪರಿಶೀಲನೆಗೊಂಡು ಅ.30ರಂದು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದ್ದು ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 12 ಮಂದಿ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 12 ಮಂದಿ ಅಭ್ಯರ್ಥಿಗಳು ನಡುವೆ ಪೈಪೋಟಿ ನಡೆಯಲಿದೆ.

ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಸಾಮಾನ್ಯ ಸ್ಥಾನದಿಂದ 6 ಮಂದಿ, ಅನುಸೂಚಿತ ಜಾತಿ ಹಾಗೂ ಪಂಗಡ ಮೀಸಲುವಿನಿಂದ, ಹಿಂದುಳಿದ ವರ್ಗ “ಎ” ಹಾಗೂ “ಬಿ” ಮೀಸಲು ಸ್ಥಾನದಿಂದ ತಲಾ ಒಂದರಂತೆ ಹಾಗೂ ಮಹಿಳಾ ಮೀಸಲು ಎರಡು ಸ್ಥಾನಗಳಿಗೆ ಸ್ಪರ್ಧೆ ಏರ್ಪಟ್ಟಿದೆ.

ಸಾಮಾನ್ಯ ಸ್ಥಾನದಿಂದ ಆಶ್ರಫ್, ಪಿ.ಕೆ. ಉಸ್ಮಾನ್, ಗುರುಪ್ರಸಾದ್, ಚಂದ್ರಶೇಖರ್ ಕುಂಡಡ್ಕ, ಚಂದ್ರಶೇಖರ ಪೊರ್ಕಳ, ಪ್ರವೀಣ್ ರೈ, ಪ್ರಸನ್ನ ಗೌಡ, ಪ್ರಶಾಂತ್ ಪೈ ಎ, ಬಾಲಕೃಷ್ಣ ಶೆಟ್ಟಿ, ಶಿವಪ್ರಸಾದ್, ಮೋಹನ್ ಗೌಡ, ಹರ್ಷಿತ್ ಕೆ, ಹಿಂದುಳಿದ ವರ್ಗ “ಎ”ನಿಂದ ಶೀಧರ್ ಎನ್ ಮತ್ತು ಶೇಷಪ್ಪ ಸಾಲಿಯಾನ್, ಹಿಂದುಳಿದ ವರ್ಗ “ಬಿ”ನಿಂದ ಕಾಂತಪ್ಪ ಗೌಡ ಮತ್ತು ರಾಜೇಶ್ ರೈ, ಪರಿಶಿಷ್ಟ ಪಂಗಡದಿಂದ ಪುಷ್ಪಾ ಮತ್ತು ಶಿವಾರಮ್, ಪರಿಶಿಷ್ಟ ಜಾತಿಯಿಂದ ಜಯಂತಿ ಮತ್ತು ಸುರೇಶ ಸುಣ್ಣಾಜೆ ಮಹಿಳಾ ಮೀಸಲು ಕ್ಷೇತ್ರದಿಂದ ಉಷಾ, ಸರೋಜಿನಿ, ಸವಿತಾ ಹಾಗೂ ಹೇಮಾವತಿ ಅವರುಗಳ ನಡುವೆ ಪೈಪೋಟಿ ನಡೆಯಲಿದೆ.

Related posts

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya
error: Content is protected !!