ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿ ಮೊಗ್ರು ಗ್ರಾಮದ ಸತೀಶ್ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು, ರಂಗ ಭೂಮಿ ಕಲಾವಿದ ಹರೀಶ್ ಕುಮಾರ್ ಕೊಕ್ರಾಡಿ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಸಮಾಜ ಸೇವೆಗೆ ಬೆಳ್ತಂಗಡಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರು ಆಯ್ಕೆಯಾಗಿದ್ದಾರೆ.






