September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಜೋಸೆಫ್ ಕುಟುಂಬ ಕಳೆದ 50 ಕ್ಕಿಂತ ಹೆಚ್ಚು ವರ್ಷಗಳು ವಾಸಿಸುತ್ತಿದ್ದು ಸರಕಾರ ಸಾಗುವಳಿಚೀಟಿ ನೀಡಿದ ಕೃಷಿ ಸ್ಥಳವನ್ನು ಅರಣ್ಯ ಪ್ರದೇಶ ಎಂಬ ಹೆಸರಿನಲ್ಲಿ ಏಕಾ ಏಕಿ ಒಕ್ಕಲೆಬ್ಬಿಸುವ ಕ್ರಮ ಕೃಷಿಕರಿಗೆ ಮಾಡಿದ ಅನ್ಯಾಯ ಎಂದು ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಆರೋಪಿಸಿದೆ.

ಬಿಟ್ಟಿ ನೆಡುನಿಲಂ ರವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ಸೇರಿ ಈ ಖಂಡನಾ ನಿರ್ಣಯವನ್ನು ಮಾಡಿದೆ. ನಿರ್ದೇಶಕರಾದ ರೆ| ಫಾ| ಆದರ್ಶ್ ಜೋಸೆಫ್ ಮಾತನಾಡಿ ಬಡ ಕೃಷಿಕರನ್ನು ಒಕ್ಕಲೆಬ್ಬಿಸುವ ಸರಕಾರದ ಇಂಥ ಹೀನಾಕೃತ್ಯಗಳು ಕೂಡಲೇ ನಿಲ್ಲಿಸದಿದ್ದಲ್ಲಿ ಕೃಷಿಕರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ. ಸಂಬಂಧ ಪಟ್ಟ ಇಲಾಖೆಗಳು ಈ ಬಗ್ಗೆ ಎಚ್ಚೆತ್ತು ಅನ್ನದಾತರನ್ನು ರಕ್ಷಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಮಲಯಾಟ್ಟಿಲ್ ಅನೇಕ ವರ್ಷಗಳಿಂದ ಕೃಷಿ ಮಾಡಿ ಜೀವನ ಕಟ್ಟಿಕೊಳ್ಳುತ್ತಿದ್ದ ಈ ಬಡವರನ್ನು ಬೀದಿಗಿಳಿಸಿದ್ದು ಅನ್ಯಾಯದ ಪರಮೋನ್ನತಿ ಎಂದು ಹೇಳಿದರು. ಅಧ್ಯಕ್ಷರು ಮಾತನಾಡುತ್ತಾ, ನಮಗೆ ವಿಷಯ ತಿಳಿದದ್ದು ಕೊನೆಯ ಗಳಿಗೆಯಲ್ಲಿ ಆದರೂ ಎಲ್ಲಾ ಅಧಿಕಾರಿಗಳಿಗೂ ರಾಜಕೀಯ ಮುಖಂಡರುಗಳಿಗೂ ವಿಷಯ ತಿಳಿಸಿ ಒಕ್ಕಲೆಬ್ಬಿಸುವ ಕಾರ್ಯ ತಡೆಹಿಡಿಯಬೇಕೆಂದು ವಿಂತಿಸಿಕೊಂಡರು ಸಮಯ ಮೀರಿತ್ತು ಇನ್ನು ಏನೂ ಮಾಡಲು ಸಾಧ್ಯ ಇಲ್ಲ ಎಂಬ ಉತ್ತರ ಸಿಕ್ಕಿರುತ್ತದೆ. ಈ ಬಗ್ಗೆ ಸರಕಾರಕ್ಕೆ ತಿಳಿಸಿ ಒಕ್ಕಲೆಬ್ಬಿಸುವ ಕಾರ್ಯ ನಿಲ್ಲಿಸಲು ಪತ್ರ ಬರೆಯಲಾಗುವುದು ಎಂದು ಹೇಳಿದರು.

ಜಿಮ್ಸೆನ್ ಗುಂಡ್ಯ, ಪಿ. ಆರ್. ಓ. ಸೆಬಾಸ್ಟಿಯನ್ ಪಿ ಸಿ, ಜಾಗತಿಕ ಸಮಿತಿ ಕಾರ್ಯದರ್ಶಿ ಜೇಸನ್ ಪಟೆರಿಲ್, ಕೇಂದ್ರ ಸಮಿತಿ ಸದಸ್ಯರಾದ ಅಲ್ಪೋನ್ಸ ,ರೀನಾ ಸಿಬಿ, ಜಾರ್ಜ್ ಟಿ ವಿ., ಮುಂತಾದವರು ಪಾಲ್ಗೊಂಡರು.

Related posts

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya
error: Content is protected !!