30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಜೋಸೆಫ್ ಕುಟುಂಬ ಕಳೆದ 50 ಕ್ಕಿಂತ ಹೆಚ್ಚು ವರ್ಷಗಳು ವಾಸಿಸುತ್ತಿದ್ದು ಸರಕಾರ ಸಾಗುವಳಿಚೀಟಿ ನೀಡಿದ ಕೃಷಿ ಸ್ಥಳವನ್ನು ಅರಣ್ಯ ಪ್ರದೇಶ ಎಂಬ ಹೆಸರಿನಲ್ಲಿ ಏಕಾ ಏಕಿ ಒಕ್ಕಲೆಬ್ಬಿಸುವ ಕ್ರಮ ಕೃಷಿಕರಿಗೆ ಮಾಡಿದ ಅನ್ಯಾಯ ಎಂದು ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಆರೋಪಿಸಿದೆ.

ಬಿಟ್ಟಿ ನೆಡುನಿಲಂ ರವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ಸೇರಿ ಈ ಖಂಡನಾ ನಿರ್ಣಯವನ್ನು ಮಾಡಿದೆ. ನಿರ್ದೇಶಕರಾದ ರೆ| ಫಾ| ಆದರ್ಶ್ ಜೋಸೆಫ್ ಮಾತನಾಡಿ ಬಡ ಕೃಷಿಕರನ್ನು ಒಕ್ಕಲೆಬ್ಬಿಸುವ ಸರಕಾರದ ಇಂಥ ಹೀನಾಕೃತ್ಯಗಳು ಕೂಡಲೇ ನಿಲ್ಲಿಸದಿದ್ದಲ್ಲಿ ಕೃಷಿಕರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ. ಸಂಬಂಧ ಪಟ್ಟ ಇಲಾಖೆಗಳು ಈ ಬಗ್ಗೆ ಎಚ್ಚೆತ್ತು ಅನ್ನದಾತರನ್ನು ರಕ್ಷಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಮಲಯಾಟ್ಟಿಲ್ ಅನೇಕ ವರ್ಷಗಳಿಂದ ಕೃಷಿ ಮಾಡಿ ಜೀವನ ಕಟ್ಟಿಕೊಳ್ಳುತ್ತಿದ್ದ ಈ ಬಡವರನ್ನು ಬೀದಿಗಿಳಿಸಿದ್ದು ಅನ್ಯಾಯದ ಪರಮೋನ್ನತಿ ಎಂದು ಹೇಳಿದರು. ಅಧ್ಯಕ್ಷರು ಮಾತನಾಡುತ್ತಾ, ನಮಗೆ ವಿಷಯ ತಿಳಿದದ್ದು ಕೊನೆಯ ಗಳಿಗೆಯಲ್ಲಿ ಆದರೂ ಎಲ್ಲಾ ಅಧಿಕಾರಿಗಳಿಗೂ ರಾಜಕೀಯ ಮುಖಂಡರುಗಳಿಗೂ ವಿಷಯ ತಿಳಿಸಿ ಒಕ್ಕಲೆಬ್ಬಿಸುವ ಕಾರ್ಯ ತಡೆಹಿಡಿಯಬೇಕೆಂದು ವಿಂತಿಸಿಕೊಂಡರು ಸಮಯ ಮೀರಿತ್ತು ಇನ್ನು ಏನೂ ಮಾಡಲು ಸಾಧ್ಯ ಇಲ್ಲ ಎಂಬ ಉತ್ತರ ಸಿಕ್ಕಿರುತ್ತದೆ. ಈ ಬಗ್ಗೆ ಸರಕಾರಕ್ಕೆ ತಿಳಿಸಿ ಒಕ್ಕಲೆಬ್ಬಿಸುವ ಕಾರ್ಯ ನಿಲ್ಲಿಸಲು ಪತ್ರ ಬರೆಯಲಾಗುವುದು ಎಂದು ಹೇಳಿದರು.

ಜಿಮ್ಸೆನ್ ಗುಂಡ್ಯ, ಪಿ. ಆರ್. ಓ. ಸೆಬಾಸ್ಟಿಯನ್ ಪಿ ಸಿ, ಜಾಗತಿಕ ಸಮಿತಿ ಕಾರ್ಯದರ್ಶಿ ಜೇಸನ್ ಪಟೆರಿಲ್, ಕೇಂದ್ರ ಸಮಿತಿ ಸದಸ್ಯರಾದ ಅಲ್ಪೋನ್ಸ ,ರೀನಾ ಸಿಬಿ, ಜಾರ್ಜ್ ಟಿ ವಿ., ಮುಂತಾದವರು ಪಾಲ್ಗೊಂಡರು.

Related posts

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹ ಅಂಗವಾಗಿ 3ನೇ ವರ್ಷದ ಪಿಲಿ ನಲಿಕೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!