25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

ಕನ್ನಡ ಭುವನೇಶ್ವರಿ ದೇವಿಯ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಿ ಮಾತನಾಡಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಕನ್ನಡಿಗರಾದ ನಾವು, ಜಾತಿ – ಮತ – ಪಂಥಗಳ ಭೇದ ಮರೆತು, ಕನ್ನಡ ಎನ್ನುವ ಹೆಸರಿನಲ್ಲಿ ಬಾಳುತ್ತಿದ್ದೇವೆ. ಕನ್ನಡ ನಮ್ಮ ಭಾವೈಕ್ಯತೆಯನ್ನು ಹೆಚ್ಚಿಸುವ ಭಾಷೆ ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಅವರು, ಜಗತ್ತಿಗೆ ಕನ್ನಡಿಗರು ನೀಡಿದ ಕೊಡುಗೆ ಅಮೂಲ್ಯವಾದುದು. ಅದನ್ನು ಸ್ಮರಿಸಿ, ಮುಂದುವರೆಸುವ ಜವಾಬ್ದಾರಿ ನಮ್ಮ ತಲೆಮಾರಿನ ಮೇಲಿದೆ ಎಂದರು.

ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ, ಭೌತ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸತ್ಯ ನಾರಾಯಣ ಭಟ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ, ಮುಖ್ಯಸ್ಥ ಪ್ರಸನ್ನ ಭೋಜ, ಉಪನ್ಯಾಸಕರಾದ ರಘು ಬಿಜೂರು ,ಅರುಣ್ ಕ್ಯಾಸ್ಟೋಲಿನ್, ಬಿ ಜಿ ಬಿರಾದಾರ್ , ಡಾ.ಆಸ್ಟಿನ್, ಉಷಾ ಬಿಕೆ , ದಿಶಾ, ಜ್ಯೋತಿ ಹೆಗ್ಡೆ, ಹೃತಿಕ್ ,ಚರಣ್, ಅರುಣ್ ಕುಮಾರ್, ಲೇಖನ, ಚೈತ್ರ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ತಿಪ್ಪೇ ಸ್ವಾಮಿ ಪ್ರಾರ್ಥಿಸಿದರು. ಮೊಹಮ್ಮದ್ ಮುನೀರ್ ನಿರೂಪಿಸಿದರು. ಕನ್ನಡ ವಿಭಾಗ ಮುಖ್ಯಸ್ಥ ಜಯರಾಮ್ ವಂದಿಸಿದರು.

Related posts

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya
error: Content is protected !!