23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

ಕನ್ನಡ ಭುವನೇಶ್ವರಿ ದೇವಿಯ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಿ ಮಾತನಾಡಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಕನ್ನಡಿಗರಾದ ನಾವು, ಜಾತಿ – ಮತ – ಪಂಥಗಳ ಭೇದ ಮರೆತು, ಕನ್ನಡ ಎನ್ನುವ ಹೆಸರಿನಲ್ಲಿ ಬಾಳುತ್ತಿದ್ದೇವೆ. ಕನ್ನಡ ನಮ್ಮ ಭಾವೈಕ್ಯತೆಯನ್ನು ಹೆಚ್ಚಿಸುವ ಭಾಷೆ ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಅವರು, ಜಗತ್ತಿಗೆ ಕನ್ನಡಿಗರು ನೀಡಿದ ಕೊಡುಗೆ ಅಮೂಲ್ಯವಾದುದು. ಅದನ್ನು ಸ್ಮರಿಸಿ, ಮುಂದುವರೆಸುವ ಜವಾಬ್ದಾರಿ ನಮ್ಮ ತಲೆಮಾರಿನ ಮೇಲಿದೆ ಎಂದರು.

ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ, ಭೌತ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸತ್ಯ ನಾರಾಯಣ ಭಟ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ, ಮುಖ್ಯಸ್ಥ ಪ್ರಸನ್ನ ಭೋಜ, ಉಪನ್ಯಾಸಕರಾದ ರಘು ಬಿಜೂರು ,ಅರುಣ್ ಕ್ಯಾಸ್ಟೋಲಿನ್, ಬಿ ಜಿ ಬಿರಾದಾರ್ , ಡಾ.ಆಸ್ಟಿನ್, ಉಷಾ ಬಿಕೆ , ದಿಶಾ, ಜ್ಯೋತಿ ಹೆಗ್ಡೆ, ಹೃತಿಕ್ ,ಚರಣ್, ಅರುಣ್ ಕುಮಾರ್, ಲೇಖನ, ಚೈತ್ರ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ತಿಪ್ಪೇ ಸ್ವಾಮಿ ಪ್ರಾರ್ಥಿಸಿದರು. ಮೊಹಮ್ಮದ್ ಮುನೀರ್ ನಿರೂಪಿಸಿದರು. ಕನ್ನಡ ವಿಭಾಗ ಮುಖ್ಯಸ್ಥ ಜಯರಾಮ್ ವಂದಿಸಿದರು.

Related posts

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

Suddi Udaya
error: Content is protected !!