September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

ಕನ್ನಡ ಭುವನೇಶ್ವರಿ ದೇವಿಯ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಿ ಮಾತನಾಡಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಕನ್ನಡಿಗರಾದ ನಾವು, ಜಾತಿ – ಮತ – ಪಂಥಗಳ ಭೇದ ಮರೆತು, ಕನ್ನಡ ಎನ್ನುವ ಹೆಸರಿನಲ್ಲಿ ಬಾಳುತ್ತಿದ್ದೇವೆ. ಕನ್ನಡ ನಮ್ಮ ಭಾವೈಕ್ಯತೆಯನ್ನು ಹೆಚ್ಚಿಸುವ ಭಾಷೆ ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಅವರು, ಜಗತ್ತಿಗೆ ಕನ್ನಡಿಗರು ನೀಡಿದ ಕೊಡುಗೆ ಅಮೂಲ್ಯವಾದುದು. ಅದನ್ನು ಸ್ಮರಿಸಿ, ಮುಂದುವರೆಸುವ ಜವಾಬ್ದಾರಿ ನಮ್ಮ ತಲೆಮಾರಿನ ಮೇಲಿದೆ ಎಂದರು.

ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ, ಭೌತ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸತ್ಯ ನಾರಾಯಣ ಭಟ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ, ಮುಖ್ಯಸ್ಥ ಪ್ರಸನ್ನ ಭೋಜ, ಉಪನ್ಯಾಸಕರಾದ ರಘು ಬಿಜೂರು ,ಅರುಣ್ ಕ್ಯಾಸ್ಟೋಲಿನ್, ಬಿ ಜಿ ಬಿರಾದಾರ್ , ಡಾ.ಆಸ್ಟಿನ್, ಉಷಾ ಬಿಕೆ , ದಿಶಾ, ಜ್ಯೋತಿ ಹೆಗ್ಡೆ, ಹೃತಿಕ್ ,ಚರಣ್, ಅರುಣ್ ಕುಮಾರ್, ಲೇಖನ, ಚೈತ್ರ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ತಿಪ್ಪೇ ಸ್ವಾಮಿ ಪ್ರಾರ್ಥಿಸಿದರು. ಮೊಹಮ್ಮದ್ ಮುನೀರ್ ನಿರೂಪಿಸಿದರು. ಕನ್ನಡ ವಿಭಾಗ ಮುಖ್ಯಸ್ಥ ಜಯರಾಮ್ ವಂದಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಆಷಾಢ & ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಜಾತಿನಿಂದನೆ ಮಾಡಿ ವ್ಯಕ್ತಿಯ ಕೊಲೆಗೆ ಯತ್ನ: ನಾವೂರು ನೌಷದ್ ನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!