July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

ತಣ್ಣೀರುಪಂತ ಸುಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮತ್ತು ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ ಸಮಗ್ರ ಕೃಷಿ ಚಟುವಟಿಕೆಯ ಕುರಿತು ಮಾಹಿತಿ ಕಾರ್ಯಗಾರವನ್ನು ತಣ್ಣೀರುಪಂಥ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸವಿತಾ ಇವರ ಸಮ್ಮುಖದಲ್ಲಿ ನಡೆಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಹಾಗೂ ಜಿಲ್ಲಾ ಕೃಷಿ ವ್ಯವಸ್ಥಾಪಕ ವಿನಿತ್ ಸಮಗ್ರ ಕೃಷಿ ನಿರ್ವಹಣೆಯ ಕುರಿತು ಸದಸ್ಯರಲ್ಲಿ ಐಎಫ್ ಸಿ ಮೂಲಕ ಅನುಷ್ಠಾನ ಗೊಳಿಸಬಹುದಾದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಚರ್ಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ವ್ಯವಸ್ಥಾಪಕ ಬಂಗಾರಪ್ಪ ಮತ್ತು ಕೃಷಿಯೇತರ ಮ್ಯಾನೇಜರ್ ನಿತಿಶ್ ಕುಮಾರ್, ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ಸ್ವಸ್ತಿಕ್ ಉಪಸ್ಥಿತರಿದ್ದರು. ಹಾಗೆಯೇ ತಣ್ಣೀರುಪಂತ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶ್ರೀಮತಿ ಹೇಮಾವತಿ , ಅಭಿವೃದ್ಧಿ ಅಧಿಕಾರಿ ಸುಮಯ್ಯ ಜಿ. ಹೆಚ್. , ಕಾರ್ಯದರ್ಶಿ ಆನಂದ , ಸಿಬ್ಬಂದಿಗಳು ಹಾಗೂ ಸುಗಮ ಸಂಜೀವಿನಿ ಮತ್ತು ಕನಸು ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಪದಾಧಿಕಾರಿಗಳು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸ್ವಸ್ತಿಕ್ ಜೈನ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಸೌಮ್ಯಶ್ರೀ ಸ್ವಾಗತಿಸಿದರು. ಕೃಷಿ ಸಖಿ ಶ್ರೀಮತಿ ಶೋಭಾ ಧನ್ಯವಾದವಿತ್ತರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya
error: Content is protected !!