July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಡಾ. ಭೋಜಮ್ಮ ಕೆಎನ್ ದೀಪ ಬೆಳಗಿಸಿ ಮಾತನಾಡಿ ಕನ್ನಡ ಭಾಷೆಯ ಮಹತ್ವ ಹಾಗೂ ಕನ್ನಡ ಉಳಿವಿಗಾಗಿ ಮುಂದಿನ ಯುವ ಪೀಳಿಗೆ ಸಂಸ್ಕೃತಿ , ಸಂಸ್ಕಾರಗಳಿಗೆ ,ಪ್ರಾಧ್ಯಾನತೆ ಕೊಡಬೇಕು ಎಂಬುದನ್ನು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು.

ಮಕ್ಕಳಿಗೆ ಕನ್ನಡ ರಾಜ್ಯೋತ್ಸವಕ್ಕೆ ಸಂಬಂಧಿಸಿದಂತೆ, ಸಾಂಸ್ಕೃತಿಕ ಕಾರ್ಯಕ್ರಮ ಗಾದೆ ಮಾತುಗಳು ಸುಂದರ ಕೈಬರಹ, ಒಗಟುಗಳು, ಪದ್ಯ ರಚನೆ, ನೃತ್ಯ, ರಸಪ್ರಶ್ನೆ, ಗುಂಪು ಗೀತ ಗಾಯನ, ಭಾಷಣ ಸ್ಪರ್ಧೆ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಅಂಜಲಿ ಸ್ವಾಗತಿಸಿ, ದಿಶಾ ಪಿ ಶೆಟ್ಟಿ ಧನ್ಯವಾದವಿತ್ತರು. ಲಾಸ್ಯ ಅತಿಥಿ ಪರಿಚಯವನ್ನುಮಾಡಿದರು. ಅನಘ ಮರಾಠೆ ನಿರೂಪಿಸಿದರು.
‌ ‌‌ ‌ ಶಿಕ್ಷಕರುಗಳಾದ ಸೌಮ್ಯ ಪಿ, ನೀತಾ ಕೆ.ಎಸ್, ಶ್ರೇಯಾಂಸ ಜೈನ್, ಸಹನಾ, ಅಮಿತಾ ಪ್ರವೀಣ್ ಎನ್ ರವರ ನೇತೃತ್ವದಲ್ಲಿ ಎಲ್ಲಾ ಶಿಕ್ಷಕ / ಕಿಯರ ಸಹಕರಿಸಿದರು.

Related posts

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya
error: Content is protected !!